2:44 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮಕ್ಕಳ ಹಾಸ್ಟೆಲ್ ಊಟದಲ್ಲಿ ಹುಳ ಪ್ರತ್ಯಕ್ಷ: ಸೊಪ್ಪು, ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ!

26/09/2024, 12:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಹಾಸ್ಟೆಲ್ ವೊಂದರ ಮಕ್ಕಳು ಊಟ ಮಾಡುವ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ.
ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕರ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ನಲ್ಲಿ ಬುಧವಾರ ರಾತ್ರಿ ಊಟಕ್ಕೆ ಕುಳಿತ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಸಾಂಬಾರ್ ನಲ್ಲಿ ಹುಳ ಕಂಡಿವೆ. ತಕ್ಷಣ ಅಲ್ಲಿನ ವಾರ್ಡನ್ ಬಳಿ ಮಾಹಿತಿ ನೀಡಿ ಊಟವನ್ನು ಮಾಡದೆ 70 ಜನ ಮಕ್ಕಳು ಊಟ ಚೆಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರ ನೀಡಿದ್ದ ಅಕ್ಕಿಯಲ್ಲಿ ಹುಳ ಆಗಿತ್ತಾ? ಅಥವಾ ಅದನ್ನು ಅಡುಗೆ ಮಾಡುವ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳು ಗಮನಿಸಲಿಲ್ಲವೇ? ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕಾದ ಅಲ್ಲಿನ ಸಿಬ್ಬಂದಿಗಳು ನಿರ್ಲಕ್ಷ್ಯತನ ತೋರಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ.


ನಿನ್ನೆ ಸೊಪ್ಪಿನ ಸಾಂಬಾರ್ ನಲ್ಲೂ ಹುಳ ಇತ್ತು ಎಂದು ಹೇಳಲಾಗುತ್ತಿದ್ದು ಇಂದು ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ ಕಂಡಿದೆ. ಸುಮಾರು 70ಕ್ಕೂ ಹೆಚ್ಚು ಮಕ್ಕಳು ಬುಧವಾರ ಹಾಸ್ಟೆಲ್ ನಲ್ಲಿ ಇದ್ದು ಮಕ್ಕಳ ಆರೋಗ್ಯವನ್ನು ಲೆಕ್ಕಿಸದೆ ಈ ರೀತಿ ನಿರ್ಲಕ್ಷ್ಯತನ ವಹಿಸಿರುವುದು ಸರಿಯಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳಾದ ಆಶಾಲತಾ ಅವರು ತಕ್ಷಣ ಸ್ಥಳಕ್ಕೆ ಬೇಟಿ ಮಾಡಿ ಕ್ರಮ ಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು