6:10 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತೀರ್ಥ ಸಂರಕ್ಷಣೆಗೆ ಕ್ರಮ: ಗುಜ್ಜರಕೆರೆಗೆ ವಿವಿಧ ಜಾತಿಯ ಮೀನು ಬಿಡುಗಡೆ

29/08/2024, 18:49

ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ರಿ. ಮತ್ತು ಸಹರಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಗುಜ್ಜರಕೆರೆಗೆ ಮೀನುಗಳನ್ನು ಬಿಡಲಾಯಿತು.
ಕೆರೆಯ ನೀರಿನಲ್ಲಿರುವ ಸೊಳ್ಳೆ, ಕೀಟ ನಿಯಂತ್ರಣಕ್ಕಾಗಿ ಗಪ್ಪಿ ಮೀನು, ನೀರಿನ ಒಳಗಿನ ಹುಲ್ಲುಗಳ ನಿಯಂತ್ರಣಕ್ಕಾಗಿ ಹುಲ್ಲು ಗೆಂಡೆ ಮೀನು, ಕೆಸರಿನ ಶುದ್ಧತೆಗೆ ಗೌರಿ ಮೀನು ಮತ್ತು ನೀರಿನ ಮೇಲ್ಮೈ ಪರಿಸರದ ಸ್ವಚ್ಛತೆಗಾಗಿ ಕಾಟ್ಲ ಮೀನು ಬಿಡಲಾಯಿತು.
ಈ ಸಂದರ್ಭ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ, ಗುಜ್ಜರಕೆರೆ, ಡಾ .ಎಂ.ಎಸ್. ನಜೀರ್ ಅವರು ಕೆರೆ ಪರಿಸರ ಸ್ನೇಹಿ ಮೀನುಗಳನ್ನು ಹಾಕಿದರು.


ಈಗಾಗಲೇ ಕೆರೆಯ ಪರಿಸರದಲ್ಲಿ ಮತ್ತು ಕೆರೆಯ ನೀರಿಗೆ ತ್ಯಾಜ್ಯಗಳನ್ನು ಹಾಕಿ ದುಷ್ಕೃತ್ಯ ಎಸೆಯಲಾಗಿದ್ದು, ಈ ನಿಟ್ಟಿನಲ್ಲಿ ಮತ್ತು ಕೆರೆಯಲ್ಲಿರುವ ಜಲಚರಗಳ ಸಂರಕ್ಷಣೆಯ ನಿಟ್ಟಿನಲ್ಲಿಯೂ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳ ಬೇಕೆಂಬುವುದು ಸ್ಥಳೀಯರ ಆಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು