4:59 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತೀರ್ಥ ಸಂರಕ್ಷಣೆಗೆ ಕ್ರಮ: ಗುಜ್ಜರಕೆರೆಗೆ ವಿವಿಧ ಜಾತಿಯ ಮೀನು ಬಿಡುಗಡೆ

29/08/2024, 18:49

ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ರಿ. ಮತ್ತು ಸಹರಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಗುಜ್ಜರಕೆರೆಗೆ ಮೀನುಗಳನ್ನು ಬಿಡಲಾಯಿತು.
ಕೆರೆಯ ನೀರಿನಲ್ಲಿರುವ ಸೊಳ್ಳೆ, ಕೀಟ ನಿಯಂತ್ರಣಕ್ಕಾಗಿ ಗಪ್ಪಿ ಮೀನು, ನೀರಿನ ಒಳಗಿನ ಹುಲ್ಲುಗಳ ನಿಯಂತ್ರಣಕ್ಕಾಗಿ ಹುಲ್ಲು ಗೆಂಡೆ ಮೀನು, ಕೆಸರಿನ ಶುದ್ಧತೆಗೆ ಗೌರಿ ಮೀನು ಮತ್ತು ನೀರಿನ ಮೇಲ್ಮೈ ಪರಿಸರದ ಸ್ವಚ್ಛತೆಗಾಗಿ ಕಾಟ್ಲ ಮೀನು ಬಿಡಲಾಯಿತು.
ಈ ಸಂದರ್ಭ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ, ಗುಜ್ಜರಕೆರೆ, ಡಾ .ಎಂ.ಎಸ್. ನಜೀರ್ ಅವರು ಕೆರೆ ಪರಿಸರ ಸ್ನೇಹಿ ಮೀನುಗಳನ್ನು ಹಾಕಿದರು.


ಈಗಾಗಲೇ ಕೆರೆಯ ಪರಿಸರದಲ್ಲಿ ಮತ್ತು ಕೆರೆಯ ನೀರಿಗೆ ತ್ಯಾಜ್ಯಗಳನ್ನು ಹಾಕಿ ದುಷ್ಕೃತ್ಯ ಎಸೆಯಲಾಗಿದ್ದು, ಈ ನಿಟ್ಟಿನಲ್ಲಿ ಮತ್ತು ಕೆರೆಯಲ್ಲಿರುವ ಜಲಚರಗಳ ಸಂರಕ್ಷಣೆಯ ನಿಟ್ಟಿನಲ್ಲಿಯೂ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳ ಬೇಕೆಂಬುವುದು ಸ್ಥಳೀಯರ ಆಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು