2:37 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಕ್ಷೇತ್ರದಲ್ಲಿ ತೀರ್ಥಹಳ್ಳಿ ಹುಡುಗ ನಿತಿನ್ ಸಾಧನೆ!: ಐಪಿಎಲ್ ಗೆ ಆಯ್ಕೆಯಾಗುವ ಸಾಧ್ಯತೆ

18/07/2025, 10:32

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com

ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಪಂದ್ಯಕ್ಕೆ ಇದೀಗ ತೀರ್ಥಹಳ್ಳಿ
ತಾಲೂಕಿನ ನಿತಿನ್ ಆಯ್ಕೆ ಆಗಿದ್ದು, ಹುಬ್ಬಳ್ಳಿ ತಂಡದಲ್ಲಿ ಅಡಲಿದ್ದಾರೆ.
ನಿತಿನ್ ಅವರು ಮೂಲತಃ ತೀರ್ಥಹಳ್ಳಿ ತಾಲೂಕಿನ ಆರಗ ಮೂಲದ ಶಾಂತವೇರಿಯವರು.
ತಂದೆ ನಾಗರಾಜ , ತಾಯಿ ಗಾಯತ್ರಿ, ಸಹೋದರಿ ನೇಹಾ.
ತೀರ್ಥಹಳ್ಳಿಯ ಅಬ್ದುಲ್ ಕಲಾಂ ಅವರ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಯಲ್ಲಿ ತರಬೇತಿ ಪಡೆದ ಆರಗ ಶಾಂತವೇರಿ ಗ್ರಾಮದ ನಿತಿನ್ ಕರ್ನಾಟಕ ಪ್ರೀಮಿಯರ್ ಲೀಗ್ (KPL ) ಆಯ್ಕೆ ಆಗಿರುವುದು ಇದೀಗ ತೀರ್ಥಹಳ್ಳಿಯ ಹಾಗೂ ಮಲೆನಾಡ ಜನರಿಗೆ ಹೆಮ್ಮೆಯ ವಿಷಯವಾಗಿದೆ.
ನಿತಿನ್ ಮೊದಲು ಕ್ರಿಕೆಟ್ ಆರಂಭಿಸಿದ್ದು ನ್ಯಾಷನಲ್ ಸಂಸ್ಥೆಯ ಅಬ್ದುಲ್ ಕಲಾಂ ಅವರ ತೀರ್ಥಹಳ್ಳಿಯ ಬಾಳೆಬೈಲಿನ ಸಿಟಿ ಕ್ಲಬ್ ಅಲ್ಲಿ. ಇಲ್ಲಿ ಈತನಿಗೆ ಲೆದರ್ ಆಡುವ ಅವಕಾಶ ಕಲ್ಪಿಸಿತು, ನಂತರ ಬೆಂಗಳೂರಿನಲ್ಲಿ ಇವನ ಬೌಲಿಂಗ್‌ ಮಾಡೋ ರೀತಿ ನೋಡಿ ಅಭಿಮನ್ಯು ಮಿಥುನ್ ಅವರ ತಮ್ಮ ರನ್ ಅಪ್ ಅಕಾಡೆಮಿ ಯಲ್ಲಿ ಉಚಿತ ಕೋಚ್ ಜೀಮ್ ಬೇಕಾದ ಪ್ರೋಟಿನ್ ಗಳನ್ನು ಒದಗಿಸುವುದರ ಮೂಲಕ ಕೈ ಹಿಡಿಯುತ್ತಾರೆ. ಕಠಿಣ ತರಬೇತಿ ಬಳಿಕ ಈಗಾಗಲೇ 140 ಸ್ಪೀಡ್ ನಲ್ಲಿ ಬಾಲ್ ಎಸೆಯುವ ಸಾಮರ್ಥ್ಯ ಇರುವ ನಿತಿನ್ ಅವರನ್ನು ಹುಬ್ಬಳ್ಳಿ ಟೈಗರ್ಸ್ ಗುರುತಿಸಿ 25 ಲಕ್ಷಕ್ಕೆ ಬಿಡ್ ಮಾಡಿದೆ.
6.3 ಎತ್ತರದ ನೀಳಕಾಯದ ಈ ಯುವಕನಿಗೆ ಭಾರತ ತಂಡವನ್ನು ಪ್ರತಿನಿಧಿಸುವ ಎಲ್ಲಾ ಅರ್ಹತೆ ಇದೆ.
ನಿತಿನ್ ಅವರನ್ನು ಕಳೆದ ಬಾರಿಯ ಕೆಪಿಎಲ್ ವಿನ್ನಿಂಗ್ ತಂಡ ವಾದ ಹುಬ್ಬಳ್ಳಿ ಟೈಗರ್ಸ್ ಬಿಡ್ ಮಾಡಿ ತಮ್ಮ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದು ಅತ್ಯುತ್ತಮ ಕ್ರಿಕೆಟ್ ಕ್ರೀಡಾ ಪಟುವಾಗಿರುವ ನಿತಿನ್ ಕೆಪಿಎಲ್ ನಲ್ಲಿ ಚೆನ್ನಾಗಿ ಆಟವಾಡಿದರೆ ಐಪಿಎಲ್ ಕದ ತಟ್ಟುವ ಸಾಧ್ಯತೆ ಕೂಡ ಹೆಚ್ಚಿದೆ. ಈತನ ಸಾಧನೆಯನ್ನು ಪೋಷಕರು, ಸ್ನೇಹಿತರು, ಅಭಿಮಾನಿಗಳು, ಪಟ್ಟಣದ ಸಾರ್ವಜನಿಕರು ಪ್ರಶಂಶಿಸಿ ಶುಭ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು