8:41 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ

20/09/2024, 15:17

ರಶ್ಮಿ ಶ್ರೀಕಾಂತ್ ನಾಯಕ್ ಶಿವಮೊಗ್ಗ

info.reporterkarnataka@gmail.com

ಶಾಂತಿ, ಸುವ್ಯವಸ್ಥೆಗೆ ಹೆಸರಾದ ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು.ಸೌಹಾರ್ದತೆ ಮೆರೆದಿದ್ದಾರೆ.
ಹೌದು.ಗುರುವಾರ ತೀರ್ಥಹಳ್ಳಿಯ ಛತ್ರಕೇರಿ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ಉಪಹಾರ ಹಾಗೂ ಬಾದಾಮಿ ಹಾಲಿನ ವ್ಯವಸ್ಥೆ ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಪಾಲ್ಗೊಂಡರು.
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಅನ್ನು ಸಂಭ್ರಮದಿಂದ ಆಚರಿಸುವ ಮೂಲಕ ತೀರ್ಥಹಳ್ಳಿಯ ಹಿಂದೂ ಮುಸ್ಲಿಂ ಬಾಂಧವರು
ಸೌಹಾರ್ದತೆ ಮೆರೆದಿದ್ದಾರೆ. ತೀರ್ಥಹಳ್ಳಿಯ ಮೆರವಣಿಗೆಯಲ್ಲಿ ಪಾಲ್ಗೊಂಡವರು ಧನ್ಯವಾದ ಅರ್ಪಿಸಿದ್ದಾರೆ.
ಶ್ರೀ ಸಿದ್ದಿ ವಿನಾಯಕ ಯುವಕ ಸಂಘದ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ರಾಜಬೀದಿ ಉತ್ಸವದ ಸಮಯದಲ್ಲಿ
ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾ ಕಲಾತಂಡ ಹಾಗೂ ಸಂಘದ ಸದಸ್ಯರುಗಳಿಗೆ ಸೀಬಿನಕೆರೆ ಮೊಹರಂ ಕಮಿಟಿ, ಉಪಹಾರ ಹಾಗೂ ಬಾದಾಮಿ ಹಾಲು ವ್ಯವಸ್ಥೆಯನ್ನು ಮಾಡಿದ್ದರು.
ಈ ಸಂದರ್ಭದಲ್ಲಿ ಆ ವಾರ್ಡ್ ಸದಸ್ಯರಾದ ರತ್ನಾಕರ್ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು