9:48 PM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

17/09/2024, 17:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಸ್ಲಿಂ ಧರ್ಮಿಯರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬವನ್ನು ಸೋಮವಾರ ವಿಜೃಂಭಣೆಯಿಂದ ಸಡಗರ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.


ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪರಸ್ಪರ ಸರ್ವಧರ್ಮ ಸಮನ್ವಯತೆಯೊಂದಿಗೆ ಸರ್ವರ ಸಹಕಾರದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಿಹಿ ಹಂಚಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಲೋಕಾನುಗ್ರಹಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರ ಜನ್ಮ ದಿನಾಚರಣೆಯ ಪ್ರಯುಕ್ತ ವರ್ಷಂಪ್ರತಿ ನಡೆಸುವಂತೆ ಈ ಬಾರಿಯೂ ಪವಿತ್ರ ರಬೀವುಲ್ ಅವ್ವಲ್ ತಿಂಗಳಲ್ಲಿ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (SSF) ಇಂದಿರಾನಗರ ಮತ್ತು ತೀರ್ಥಹಳ್ಳಿ ಶಾಖೆಯ ಕಾರ್ಯಕರ್ತರು “ಬೃಹತ್ ಬುರ್ದಾ ಮಜ್ಲಿಸ್” ಕಾರ್ಯಕ್ರಮವನ್ನು ಬಹುಮಾನ್ಯರಾದ ಅಸ್ಸಯ್ಯದ್ ಅಬೂಬಕರ್ ಸಿದ್ದೀಕ್ ತಂಙಳ್ ಅಲ್ ಹಾದಿ ಅವರ ನೇತೃತ್ವದಲ್ಲಿ ಸಾಗರ ರಸ್ತೆಯಲ್ಲಿರುವ ಜಲಾಲಿಯಾ ಸುನ್ನೀ ಜಾಮಿಯ ಮಸೀದಿಯಲ್ಲಿ. ಮುಹಿಯದ್ದೀನ್ ಜುಮಾ ಮಸೀದಿ ಇಂದಿರಾನಗರ ಇದರ ಆಶ್ರಯದಲ್ಲಿ, ಆಯೋಜಿಸಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷರಾದ ಸುಲೈಮಾನ್ ಹಾಜಿ, ಹಂಝ ಇಂದಿರಾನಗರ ಸಹಿತ ಸರ್ವ ಸಮಿತಿಯ ಸದಸ್ಯರು ಹಾಗೂ ನ್ಯಾಷನಲ್ ಸಮೂಹ ಸಂಸ್ಥೆಯ ಡಿ .ಎಸ್ ಅಬ್ದುಲ್ ರೆಹಮಾನ್, ಸುನ್ನೀ ಯುವಜನ ಸಂಘದ (SYS) ನಾಯಕರಾದ ಶಾಹುಲ್ ಹಮೀದ್ ಉಸ್ತಾದ್, ಜಮಾತಿನ ಉಸ್ತಾದರುಗಳು ,
ಹಾಗೂ ಮುಸ್ಲಿಂ ಮುಖಂಡರು, ಮುಸ್ಲಿಂ ಧರ್ಮ ಬಾಂಧವರು ಮೊದಲಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮ ಮಂಗಳೂರಿನ ಪ್ರತಿಷ್ಠಿತ ಬುಖಾರಿಯ್ಯಾ ಬುರ್ದಾ ತಂಡದವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು