7:17 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

17/09/2024, 17:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಸ್ಲಿಂ ಧರ್ಮಿಯರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬವನ್ನು ಸೋಮವಾರ ವಿಜೃಂಭಣೆಯಿಂದ ಸಡಗರ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.


ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪರಸ್ಪರ ಸರ್ವಧರ್ಮ ಸಮನ್ವಯತೆಯೊಂದಿಗೆ ಸರ್ವರ ಸಹಕಾರದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಿಹಿ ಹಂಚಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಲೋಕಾನುಗ್ರಹಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರ ಜನ್ಮ ದಿನಾಚರಣೆಯ ಪ್ರಯುಕ್ತ ವರ್ಷಂಪ್ರತಿ ನಡೆಸುವಂತೆ ಈ ಬಾರಿಯೂ ಪವಿತ್ರ ರಬೀವುಲ್ ಅವ್ವಲ್ ತಿಂಗಳಲ್ಲಿ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (SSF) ಇಂದಿರಾನಗರ ಮತ್ತು ತೀರ್ಥಹಳ್ಳಿ ಶಾಖೆಯ ಕಾರ್ಯಕರ್ತರು “ಬೃಹತ್ ಬುರ್ದಾ ಮಜ್ಲಿಸ್” ಕಾರ್ಯಕ್ರಮವನ್ನು ಬಹುಮಾನ್ಯರಾದ ಅಸ್ಸಯ್ಯದ್ ಅಬೂಬಕರ್ ಸಿದ್ದೀಕ್ ತಂಙಳ್ ಅಲ್ ಹಾದಿ ಅವರ ನೇತೃತ್ವದಲ್ಲಿ ಸಾಗರ ರಸ್ತೆಯಲ್ಲಿರುವ ಜಲಾಲಿಯಾ ಸುನ್ನೀ ಜಾಮಿಯ ಮಸೀದಿಯಲ್ಲಿ. ಮುಹಿಯದ್ದೀನ್ ಜುಮಾ ಮಸೀದಿ ಇಂದಿರಾನಗರ ಇದರ ಆಶ್ರಯದಲ್ಲಿ, ಆಯೋಜಿಸಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷರಾದ ಸುಲೈಮಾನ್ ಹಾಜಿ, ಹಂಝ ಇಂದಿರಾನಗರ ಸಹಿತ ಸರ್ವ ಸಮಿತಿಯ ಸದಸ್ಯರು ಹಾಗೂ ನ್ಯಾಷನಲ್ ಸಮೂಹ ಸಂಸ್ಥೆಯ ಡಿ .ಎಸ್ ಅಬ್ದುಲ್ ರೆಹಮಾನ್, ಸುನ್ನೀ ಯುವಜನ ಸಂಘದ (SYS) ನಾಯಕರಾದ ಶಾಹುಲ್ ಹಮೀದ್ ಉಸ್ತಾದ್, ಜಮಾತಿನ ಉಸ್ತಾದರುಗಳು ,
ಹಾಗೂ ಮುಸ್ಲಿಂ ಮುಖಂಡರು, ಮುಸ್ಲಿಂ ಧರ್ಮ ಬಾಂಧವರು ಮೊದಲಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮ ಮಂಗಳೂರಿನ ಪ್ರತಿಷ್ಠಿತ ಬುಖಾರಿಯ್ಯಾ ಬುರ್ದಾ ತಂಡದವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು