4:18 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: 300 ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

18/09/2024, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ತೀರ್ಥಹಳ್ಳಿಯಲ್ಲಿ ಇಂದು 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸ ಆಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಥವಾ ಅಧಿಕಾರಿಗಳಿಂದ ತೊಂದರೆ ಆದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು