3:49 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: 300 ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

18/09/2024, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ತೀರ್ಥಹಳ್ಳಿಯಲ್ಲಿ ಇಂದು 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸ ಆಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಥವಾ ಅಧಿಕಾರಿಗಳಿಂದ ತೊಂದರೆ ಆದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು