12:08 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು