3:50 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ರಥಬೀದಿಯಲ್ಲಿ ನೂತನ ಪೊಲೀಸ್ ಠಾಣೆ ನಾಳೆಯಿಂದ ಕಾರ್ಯಾರಂಭ

07/08/2024, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದ ರಥಬೀದಿಯಲ್ಲಿ ಇತ್ತೀಚಿಗೆ ನೂತನ ಪೊಲೀಸ್ ಠಾಣೆ ಉದ್ಘಾಟನೆಗೊಂಡಿದ್ದು ನಾಳೆ ( ಆಗಸ್ಟ್ 8) ಗುರುವಾರ ದಿಂದ ಕೆಲಸ ಕಾರ್ಯಗಳು ಕಾರ್ಯಾರಂಭ ಮಾಡಲಿವೆ.
ಸಾರ್ವಜನಿಕರು ತಮ್ಮ ಅಗತ್ಯ ಕೆಲಸ ಕಾರ್ಯಗಳಿಗೆ, ಕುಂದು ಕೊರತೆ, ಹಾಗೂ ದೂರುಗಳನ್ನು ನೂತನ ಠಾಣೆಯಲ್ಲಿ ಸಲ್ಲಿಸಬಹುದಾಗಿದೆ.
ಇಲ್ಲಿಯವರೆಗೆ ಸೊಪ್ಪುಗುಡ್ಡೆಯ ನಾಡ್ತಿಯಲ್ಲಿದ್ದ ಪೊಲೀಸ್ ಠಾಣೆ ಸಾರ್ವಜನಿಕರಿಗೆ ದೂರವಾಗುತ್ತಿತ್ತು ಎಂಬ ಮಾತು ಕೂಡ ಸಾರ್ವಜನಿಕವಾಗಿ ಕೇಳಿ ಬರುತ್ತಿತ್ತು.
ಈಗ ಪಟ್ಟಣದ ಹೃದಯಭಾಗದ ರಥಬೀದಿಯಲ್ಲಿ ಪೋಲೀಸ್ ಠಾಣೆ ಕಾರ್ಯ ಆರಂಭಿಸಿದ್ದು ಪಟ್ಟಣದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ಡಿವೈಎಸ್’ಪಿ ಕಚೇರಿ ಮಾತ್ರ ಸೊಪ್ಪುಗುಡ್ಡೆಯಲ್ಲೇ ಇರಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು