6:06 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮಿಥಾಲಿ ಮತ್ತು ಸಾರ್ಥಕ್ ಅಥ್ಲೆಟಿಕ್ ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

21/09/2024, 22:00

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ವಾಗ್ದೇವಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಥ್ಲೇಟಿಕ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಹಾದ್ರಿ ಪ್ರೌಢಶಾಲೆಯ
ಸಂಯುಕ್ತಾಶ್ರಯದಲ್ಲಿ ಡಾ|| ಯು.ಆರ್. ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೊಮಿತಿಯೊಳಗಿನ ತಾಲೂಕು ಮಟ್ಟದ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ,ವಾಗ್ದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್. ಬಾಲಕಿಯರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಹಾಗೂ 10ನೆಯ ತರಗತಿ ವಿದ್ಯಾರ್ಥಿ ಸಾರ್ಥಕ್ ಕೆ. ಎಸ್. ಬಾಲಕರ ವಿಭಾಗದ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇದಲ್ಲದೆ 9ನೇ ತರಗತಿಯ ಸಾನ್ನಿ ಜಾವಲಿನ್ ಎಸೆತದಲ್ಲಿ ಶೃತಿಯಸ್ಥಾನವನ್ನು ಪಡೆದು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ.ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಅಭಿನಂದಿಸಿ ಮುಂದಿನ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು