2:30 AM Saturday3 - January 2026
ಬ್ರೇಕಿಂಗ್ ನ್ಯೂಸ್
Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವು

04/09/2024, 21:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಹೊದಲದ ಕೌದಳ್ಳಿ ಬಳಿಯ ಹೊಸಗದ್ದೆಯ ಯುವಕನೋರ್ವ ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ಸಂತೋಷ (34 ) ಮೃತ ಪಟ್ಟ ದುರ್ದೈವಿ. ಇಂದು ಮಧ್ಯಾಹ್ನದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿಯೇ ಹೊರಟು ಹೊದಲದ ಅಂಗಡಿಯೊಂದರ ಬಳಿ ಬಂದು ಕುಳಿತಿದ್ದಾರೆ. ನಂತರ ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ಹೊರಟಿದ್ದಾರೆ.
ವಡ್ಡಿನಬೈಲು ಸಮೀಪ ಬರುವ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟಿಯೂ ಸಹ ಅವರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಪತ್ನಿ ಬಾಣಂತಿಯಾಗಿದ್ದು ಮೂರು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಲಾಗುತ್ತಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು