1:16 PM Tuesday3 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವು

04/09/2024, 21:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಹೊದಲದ ಕೌದಳ್ಳಿ ಬಳಿಯ ಹೊಸಗದ್ದೆಯ ಯುವಕನೋರ್ವ ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ಸಂತೋಷ (34 ) ಮೃತ ಪಟ್ಟ ದುರ್ದೈವಿ. ಇಂದು ಮಧ್ಯಾಹ್ನದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿಯೇ ಹೊರಟು ಹೊದಲದ ಅಂಗಡಿಯೊಂದರ ಬಳಿ ಬಂದು ಕುಳಿತಿದ್ದಾರೆ. ನಂತರ ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ಹೊರಟಿದ್ದಾರೆ.
ವಡ್ಡಿನಬೈಲು ಸಮೀಪ ಬರುವ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟಿಯೂ ಸಹ ಅವರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಪತ್ನಿ ಬಾಣಂತಿಯಾಗಿದ್ದು ಮೂರು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಲಾಗುತ್ತಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು