6:27 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ

06/01/2025, 22:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಕಿತ್ತನಗದ್ದೆ ನಾಡ್ತಿ ಹೊಳೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ಮರಳು ಮಾಫಿಯ ಜಾಲವೊಂದರ ಬಗ್ಗೆ ತಿಳಿದು ದಾಳಿ ಮಾಡಿರುವ ತಹಸೀಲ್ದಾರ್ ಮತ್ತು ತಂಡ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತನಗದ್ದೆ ನಾಡ್ತಿ ಹೊಳೆಯಲ್ಲಿ ಬೃಹತ್ ಪ್ರಮಾಣದ ಮರಳು ಮಾಫಿಯ ಜಾಲವೊಂದು ಪತ್ತೆಯಾಗಿದೆ. ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಎಸ್. ಮಾಮೂಲಿನಂತೆ ಗಸ್ತು ತಿರುಗುವ ವೇಳೆ ಅಚಾನಕ್ ಮರಳು ಸಾಗಿಸುವ ವಾಹನ ಎದುರಾಗಿದ್ದು, ಅನುಮಾನದಿಂದ ಹಿಂಬಾಲಿಸಿದಾಗ ಹೊಳೆಯ ತುಂಬೆಲ್ಲ ಮರಳನ್ನು ಮೇಲೇತ್ತಲು ಹಾಗೂ ಅದನ್ನು ಫಿಲ್ಟರ್ ಮಾಡಲು ಬಳಸುವ ವಿನೂತನ ಸಾಧನಗಳು ಹಾಗೂ ಅಲ್ಲಲ್ಲಿ ಜರಡಿ ಹಿಡಿದಿಟ್ಟ ದಿಮ್ಮಿಗಳಿಂದ ಕೂಡಿದ ಫಿಲ್ಟರ್ ಕಂಡು ಬಂದ ಹಿನ್ನಲೆ ಇದೊಂದು ದೊಡ್ಡ ಮರಳು ಮಾಫಿಯ ಎಂದು ತಿಳಿದು ಹೊಳೆಯಲ್ಲಿದ್ದ ವಿನೂತನ ವಾಹನಗಳನ್ನು ತಹಶೀಲ್ದಾರ್ ರಂಜಿತ್ ವಶ ಪಡಿಸಿಕೊಂಡು ಪೊಲೀಸ್ ಕಷ್ಟಡಿಗೆ ಒಪ್ಪಿಸಿದ್ದಾರೆ.
ಈ ವೇಳೆ ಮರಳು ಕೊರೆಯಲ್ಲಿದ್ದ ಮರಳು ತುಂಬುತ್ತಿದ್ದ ಕೆಲಸಗಾರರು ಓಡಿ ಹೋಗಿದ್ದಾರೆ. ಜೊತೆಗೆ ಇಷ್ಟೊಂದು ಧಾರಾಳವಾಗಿ ಮಾಡಿದ ವಿನೂತನ ಮರಳು ಕಳ್ಳ ಸಾಗಾಣಿಕೆಯಲ್ಲಿ ದೊಡ್ಡ ದೊಡ್ಡವರ ಪಾತ್ರ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಈ ಪ್ರಕರಣ ಹೇಗೆ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು