9:42 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಭೀಕರ ನರಮೇಧ: 18 ವಿದ್ಯಾರ್ಥಿ ಸೇರಿ 21 ಮಂದಿಯ  ಗುಂಡಿಕ್ಕಿ ಹತ್ಯೆ

25/05/2022, 20:18

ಟೆಕ್ಸಾಸ್(reporterkarnataka.com) ಬಂದೂಕುಧಾರಿ 18ರ ಹರೆಯದ ತರುಣನೊಬ್ಬ ಇಲ್ಲಿನ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿ ಯದ್ವಾತದ್ವಾ ಗುಂಡಿನ ದಾಳಿ

ನಡೆಸಿದ ಪರಿಣಾಮ 18 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ.

ಈ ಹತ್ಯಾಕಾಂಡ ನಡೆಸಿದ ತರುಣನನ್ನು ಸಾಲ್ವಡಾರ್ ರಾಮೋಸ್ ಎಂದು ಗುರುತಿಸಲಾಗಿದ್ದು, ನಂತರ ಪೊಲೀಸರು ಆತನನ್ನು ಗುಂಡಿಟ್ಟು ಸಾಯಿಸಿದ್ದಾರೆ.

ಟೆಕ್ಸಾಸ್‌ನ ರಾಬ್ ಪ್ರಾಥಮಿಕ ಶಾಲೆಯಲ್ಲಿ ಈ ರಕ್ತಪಾತ ನಡೆದಿದೆ.18 ಮಕ್ಕಳು ಮತ್ತು 3 ವಯಸ್ಕರನ್ನು ಸಾಲ್ವಾಡಾರ್‌ ರಾಮೋಸ್‌ ಬಂದೂಕಿನಲ್ಲಿ ಹೊಸಕಿ ಹಾಕಿದ್ದಾನೆ. ರಾಬ್  ಸ್ಕೂಲ್ ನಲ್ಲಿ 600 ರಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಗುಂಡಿನ ದಾಳಿಗೆ ಬಲಿಯಾಗಿರುವ ಮಕ್ಕಳ ವಯಸ್ಸು ಎಷ್ಟು ಅನ್ನೋದು ತಿಳಿದು ಬಂದಿಲ್ಲ. ಒಂದು ವಾರ ಕಳೆದಿದ್ದರೆ ಮಕ್ಕಳಿಗೆ ಬೇಸಿಗೆ ರಜೆಯನ್ನು ನೀಡಲಾಗುತ್ತಿತ್ತು. ಆದರೆ ಅದೃಷ್ಟವಶಾತ್‌ ದುರಂತರ ಸಂಭವಿಸಿದೆ.

ಈ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ವಿಷಾದ ವ್ಯಕ್ತಪಡಿಸಿದ್ದಾರೆ. ಟೆಕ್ಸಾಸ್‌ನಲ್ಲಿ ಮೃತರ ಗೌರವಾರ್ಥ ಸೂರ್ಯಾಸ್ತದ ಮೂಲಕ ಅಮೆರಿಕದ ಧ್ವಜಗಳನ್ನು ಅರ್ಧ ಹಾರಿಸುವ ಮೂಲಕ ಶೋಕಾಚರಣೆ ಆಚರಿಸುವಂತೆ ಕರೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು