1:22 PM Sunday5 - April 2026
ಬ್ರೇಕಿಂಗ್ ನ್ಯೂಸ್
ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ…

ಇತ್ತೀಚಿನ ಸುದ್ದಿ

ತೆಲಂಗಾಣದಿಂದ ಪ್ರವಾಸ ಬಂದಿದ್ದ ವ್ಯಕ್ತಿ ಬ್ರಹ್ಮಾವರ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಸಾವು

30/10/2022, 11:56

ಬ್ರಹ್ಮಾವರ(reporterkarnataka.com): ಲಾಡ್ಜ್ ನಲ್ಲಿ‌ ತಂಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ಮದರ್‌ ಪ್ಯಾಲೇಸ್‌ ನಲ್ಲಿ ಇಂದು ಮುಂಜಾನೆ 3ಗಂಟೆಗೆ ನಡೆದಿದೆ.

ತೆಲಂಗಾಣ ರಾಜ್ಯದ ಸಿದ್ದಿಪೇಟ ಜಿಲ್ಲೆಯ‌ ಸಿದ್ದಿಪೇಟ ನಿವಾಸಿ ವಿ. ಶ್ರೀನಿವಾಸ(61) ಮೃತದುರ್ದೈವಿ. ಇವರು ಅ.26ರಂದು ಮಗ ಮೋಹನ ಕುಮಾರ್, ಪತ್ನಿ, ಮಗನ ಹೆಂಡತಿ, ಮಗುವಿನೊಂದಿಗೆ ಉಡುಪಿ ಜಿಲ್ಲೆ ಪ್ರವಾಸಕ್ಕೆ ಬಂದಿದ್ದರು. ಅ. 27ರಂದು ಕೊಲ್ಲೂರು ದೇವರ ದರ್ಶನ ಮುಗಿಸಿಕೊಂಡು, ವಿಶ್ರಾಂತಿ ಪಡೆಯಲು ಬ್ರಹ್ಮಾವರ ಮದರ್‌ ಪ್ಯಾಲೇಸ್‌ ಗೆ ಬಂದು ತಂಗಿದ್ದರು. ಇಂದು ಬೆಳಗ್ಗಿನ ಜಾವ 3:10ಕ್ಕೆ ವಿ.ಶ್ರೀನಿವಾಸ ಅವರಿಗೆ ಜ್ವರ ಹಾಗೂ ಉಸಿರಾಟದ ತೊಂದರೆವುಂಟಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಮಹೇಶ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈಧ್ಯರು ಶ್ರೀನಿವಾಸ ರವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ಧಾರೆ.

ಶ್ರೀನಿವಾಸ್ ಅವರು ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದು, ಅದೇ ಕಾರಣದಿಂದ ಅಥವಾ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು