10:47 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತೆಲಂಗಾಣ ರಸ್ತೆ ಅಪಘಾತ: ಅಥಣಿ ಕುಟುಂಬದ ಮತ್ತೊಬ್ಬ ಗಾಯಾಳು ಸಾವು; ಮೃತರ ಸಂಖ್ಯೆ 7ಕ್ಕೇರಿಕೆ

26/09/2023, 19:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ಗಾಯಾಳು ಸಾವನ್ನಪ್ಪುದರೊಂದಿಗೆ ಮೃತರ ಸಂಖ್ಯೆ 7ಕ್ಕೇರಿದೆ.


ಸೆಪ್ಟಂಬರ್ 15 ರಂದು ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ ಕಡಪಾ- ಚಿತ್ತೂರು ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಅಥಣಿ ತಾಲೂಕಿನ ಬಡಚಿ ಗ್ರಾಮದ 5 ಮಂದಿ ಸಾವನ್ನಪ್ಪಿದ್ದರು. ತಿರುಪತಿ ಪ್ರವಾಸಕ್ಕೆ ತೆರಳಿದ ಆಜೂರ್ ಕುಟುಂಬದ 14 ಜನರಲ್ಲಿ ನಾಲ್ವರು ಹಾಗೂ ವಾಹನ ಚಾಲಕ ಒಟ್ಟು ಐದು ಜನ ಸ್ಥಳದಲ್ಲೇ ಮೃತ ಪಟ್ಟಿದ್ದರು ಕಸ್ತೂರಿ ಆಜೂರ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಿಂದ – ಬೆಳಗಾವಿಗೆ ತರುವಾಗ ರಸ್ತೆ ಮದ್ಯದಲ್ಲೇ ಕೊನೆವುಸಿರೆಳೆದಿದ್ದರು.. ಇನ್ನುಳಿದ 7 ಜನರಲ್ಲಿ ಇಂದು ನಸುಕಿನ ಜಾವ ಮತ್ತೊರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೆಡಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್ ಗಿರಿಮಲ್ಲ ಆಜೂರ್ (32) ಮಹಾರಾಷ್ಟ್ರ ದ ಮಿರಜ್ ಆಸ್ಪತ್ರೆಗೆ ತರುವಾಗ ರಸ್ತೆ ಮದ್ಯ ಸಾವು ಸಂಭವಿಸಿದೆ.
ಬಸವರಾಜ ಸಾವಿನಿಂದ ಆಜೂರ ಕುಟುಂಬದ ಸಾವಿನ ಸಂಖ್ಯೆ 7ಕ್ಕೆ ಏರಿದೆ. ಇನ್ನುಳಿದ ತಿರುಪತಿ ತಿಮ್ಮಪ್ಪನ ಪ್ರವಾಸದಲ್ಲಿ ಕುಟುಂಬ ಕಳೆದುಕೊಂಡ ಆಜೂರ ಮನೆತನದಲ್ಲಿ ನೀರವ ಮೌನ ಅವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು