7:54 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ತೆಲಂಗಾಣ ರಸ್ತೆ ಅಪಘಾತ: ಅಥಣಿ ಕುಟುಂಬದ ಮತ್ತೊಬ್ಬ ಗಾಯಾಳು ಸಾವು; ಮೃತರ ಸಂಖ್ಯೆ 7ಕ್ಕೇರಿಕೆ

26/09/2023, 19:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ಗಾಯಾಳು ಸಾವನ್ನಪ್ಪುದರೊಂದಿಗೆ ಮೃತರ ಸಂಖ್ಯೆ 7ಕ್ಕೇರಿದೆ.


ಸೆಪ್ಟಂಬರ್ 15 ರಂದು ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ ಕಡಪಾ- ಚಿತ್ತೂರು ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಅಥಣಿ ತಾಲೂಕಿನ ಬಡಚಿ ಗ್ರಾಮದ 5 ಮಂದಿ ಸಾವನ್ನಪ್ಪಿದ್ದರು. ತಿರುಪತಿ ಪ್ರವಾಸಕ್ಕೆ ತೆರಳಿದ ಆಜೂರ್ ಕುಟುಂಬದ 14 ಜನರಲ್ಲಿ ನಾಲ್ವರು ಹಾಗೂ ವಾಹನ ಚಾಲಕ ಒಟ್ಟು ಐದು ಜನ ಸ್ಥಳದಲ್ಲೇ ಮೃತ ಪಟ್ಟಿದ್ದರು ಕಸ್ತೂರಿ ಆಜೂರ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಿಂದ – ಬೆಳಗಾವಿಗೆ ತರುವಾಗ ರಸ್ತೆ ಮದ್ಯದಲ್ಲೇ ಕೊನೆವುಸಿರೆಳೆದಿದ್ದರು.. ಇನ್ನುಳಿದ 7 ಜನರಲ್ಲಿ ಇಂದು ನಸುಕಿನ ಜಾವ ಮತ್ತೊರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೆಡಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್ ಗಿರಿಮಲ್ಲ ಆಜೂರ್ (32) ಮಹಾರಾಷ್ಟ್ರ ದ ಮಿರಜ್ ಆಸ್ಪತ್ರೆಗೆ ತರುವಾಗ ರಸ್ತೆ ಮದ್ಯ ಸಾವು ಸಂಭವಿಸಿದೆ.
ಬಸವರಾಜ ಸಾವಿನಿಂದ ಆಜೂರ ಕುಟುಂಬದ ಸಾವಿನ ಸಂಖ್ಯೆ 7ಕ್ಕೆ ಏರಿದೆ. ಇನ್ನುಳಿದ ತಿರುಪತಿ ತಿಮ್ಮಪ್ಪನ ಪ್ರವಾಸದಲ್ಲಿ ಕುಟುಂಬ ಕಳೆದುಕೊಂಡ ಆಜೂರ ಮನೆತನದಲ್ಲಿ ನೀರವ ಮೌನ ಅವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು