9:10 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತೆಲಂಗಾಣ ರಸ್ತೆ ಅಪಘಾತ: ಅಥಣಿ ಕುಟುಂಬದ ಮತ್ತೊಬ್ಬ ಗಾಯಾಳು ಸಾವು; ಮೃತರ ಸಂಖ್ಯೆ 7ಕ್ಕೇರಿಕೆ

26/09/2023, 19:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ಗಾಯಾಳು ಸಾವನ್ನಪ್ಪುದರೊಂದಿಗೆ ಮೃತರ ಸಂಖ್ಯೆ 7ಕ್ಕೇರಿದೆ.


ಸೆಪ್ಟಂಬರ್ 15 ರಂದು ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ ಕಡಪಾ- ಚಿತ್ತೂರು ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಅಥಣಿ ತಾಲೂಕಿನ ಬಡಚಿ ಗ್ರಾಮದ 5 ಮಂದಿ ಸಾವನ್ನಪ್ಪಿದ್ದರು. ತಿರುಪತಿ ಪ್ರವಾಸಕ್ಕೆ ತೆರಳಿದ ಆಜೂರ್ ಕುಟುಂಬದ 14 ಜನರಲ್ಲಿ ನಾಲ್ವರು ಹಾಗೂ ವಾಹನ ಚಾಲಕ ಒಟ್ಟು ಐದು ಜನ ಸ್ಥಳದಲ್ಲೇ ಮೃತ ಪಟ್ಟಿದ್ದರು ಕಸ್ತೂರಿ ಆಜೂರ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಿಂದ – ಬೆಳಗಾವಿಗೆ ತರುವಾಗ ರಸ್ತೆ ಮದ್ಯದಲ್ಲೇ ಕೊನೆವುಸಿರೆಳೆದಿದ್ದರು.. ಇನ್ನುಳಿದ 7 ಜನರಲ್ಲಿ ಇಂದು ನಸುಕಿನ ಜಾವ ಮತ್ತೊರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೆಡಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್ ಗಿರಿಮಲ್ಲ ಆಜೂರ್ (32) ಮಹಾರಾಷ್ಟ್ರ ದ ಮಿರಜ್ ಆಸ್ಪತ್ರೆಗೆ ತರುವಾಗ ರಸ್ತೆ ಮದ್ಯ ಸಾವು ಸಂಭವಿಸಿದೆ.
ಬಸವರಾಜ ಸಾವಿನಿಂದ ಆಜೂರ ಕುಟುಂಬದ ಸಾವಿನ ಸಂಖ್ಯೆ 7ಕ್ಕೆ ಏರಿದೆ. ಇನ್ನುಳಿದ ತಿರುಪತಿ ತಿಮ್ಮಪ್ಪನ ಪ್ರವಾಸದಲ್ಲಿ ಕುಟುಂಬ ಕಳೆದುಕೊಂಡ ಆಜೂರ ಮನೆತನದಲ್ಲಿ ನೀರವ ಮೌನ ಅವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು