10:52 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನದೊಳಗೆ 6 ಗ್ಯಾರಂಟಿ ಯೋಜನೆ ಜಾರಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ

10/11/2023, 22:54

ಹೈದರಾಬಾದ್(reporterkarnataka.com): ಕರ್ನಾಟಕದಲ್ಲಿ ನಾವು 5 ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ 6 ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಮಾಡುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಅವರ ಸುಳ್ಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ.ಎಂದು ಸಿದ್ದರಾಮಯ್ಯ ನುಡಿದರು.
ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರಾ? ಎಂದು ಕರ್ನಾಟಕದ ಮುಖ್ಯಮಂತ್ರಿ ಸವಾಲು ಹಾಕಿದರು.

ಬಿಜೆಪಿ ಮತ್ತು ಬಿಆರ್ ಸಿ ಎರಡೂ ಒಂದೇ. ಬಿಆರ್ ಸಿ ತೆಲಂಗಾಣದಲ್ಲಿ ಬಿಜೆಪಿ ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ. ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸವಾಗಿ ಎಂದು ಸಿದ್ದರಾಮಯ್ಯ ಟೀಕಿಸಿದರು.
ಕೆ.ಸಿ.ಆರ್ 10 ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ 10 ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡು ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಅವರು ನುಡಿದರು.
ಬಿಜೆಪಿ ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ 100 ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ.
ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ.
ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು