11:45 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನ | ಚಾಮರಾಜನಗರ: ರಣ ಬಿಸಿಲಿಗೆ ಹೆಣ್ಣಾನೆ ಬಲಿ

23/04/2026, 23:05

ಚಾಮರಾಜನಗರ(reporterkarnataka.com): ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು.ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರುತ್ತದೆ. ಅದರಲ್ಲೂ ದೈತ್ಯ ಗಾತ್ರದ ಪ್ರಾಣಿಯಾಗಿರುವ ಆನೆಗಳಿಗೆ ನೀರು ಹೆಚ್ಚುಬೇಕು. ಇದೀಗ ಇಲ್ಲೊಂದು ಆನೆ ನೀರು ಕಡಿಯಲು ಬಂದು ಪ್ರಾಣ ಕಳೆದುಕೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನೀರು ಅರಸಿ ಬಂದು ಉಡುತೊರೆ ಹಳ್ಳದ ಕೆಸರಿನಲ್ಲಿ ಮೂರು ಕಾಡಾನೆಗಳು ಸಿಲುಕಿಕೊಂಡಿತ್ತು. ಇದರ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಒಂದು ಹೆಣ್ಣಾನೆ ಚಿಕಿತ್ಸೆ ಫಲಿಸದೆ ನಿನ್ನೆ ತಡರಾತ್ರಿ ಸಾವನ್ನಪ್ಪಿದೆ. ಕಳೆದ ಎರಡು ದಿನಗಳ ಹಿಂದೆ, ತೀವ್ರ ಬಿಸಿಲಿನಿಂದ ಬಸವಳಿದಿದ್ದ ಐದು ಆನೆಗಳ ಹಿಂಡು ನೀರು ಕುಡಿಯಲು ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯ ಉಡುತೊರೆ ಹಳ್ಳದ ಹಿನ್ನೀರಿಗೆ ಬಂದಿದ್ದವು. ಈ ವೇಳೆ ಮೂರು ಆನೆಗಳು ಕೆಸರಿನಲ್ಲಿ ಹೂತು ಹೋಗಿದ್ದವು. ಇದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಅದರ ರಕ್ಷಣೆಗೆ ಧಾವಿಸಿದ್ದಾರೆ. ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಸುಮಾರು 17 ಗಂಟೆಗಳ ಕಾಲ ಸಾಹಸಮಯ ಕಾರ್ಯಾಚರಣೆ ನಡೆಸಿದರು. ಈ ವೇಳೆ ಎರಡು ಆನೆಗಳು ಸುರಕ್ಷಿತವಾಗಿ ಕೆಸರಿನಿಂದ ಹೊರಬಂದು ಕಾಡಿನತ್ತ ಕಳುಹಿಸಲಾಗಿದೆ. ಆದರೆ, ಸುಮಾರು 25 ವರ್ಷ ಪ್ರಾಯದ ಹೆಣ್ಣಾನೆಯೊಂದು ತೀವ್ರ ಅಶಕ್ತತೆಯಿಂದಾಗಿ ಎದ್ದು ನಿಲ್ಲಲು ಸಾಧ್ಯವಾಗದೆ ಅಲ್ಲಿಯೇ ಉಳಿದುಕೊಂಡಿತ್ತು. ಅಸ್ವಸ್ಥಗೊಂಡಿದ್ದ ಆನೆಗೆ ನಾಗರಹೊಳೆ ಮತ್ತು ಮಲೆ ಮಹದೇಶ್ವರ ವನ್ಯಧಾಮದ ಪಶುವೈದ್ಯರು ಸ್ಥಳದಲ್ಲೇ ಗ್ಲೂಕೋಸ್ ಮತ್ತು ತುರ್ತು ಚಿಕಿತ್ಸೆ ನೀಡಿದ್ದರು. ಜೆಸಿಬಿ ಮತ್ತು ಕ್ರೇನ್‌ಗಳ ಸಹಾಯದಿಂದ ಆನೆಯನ್ನು ಎಬ್ಬಿಸುವ ಪ್ರಯತ್ನ ಮಾಡಿದರೂ ಅದು ಯಶಸ್ವಿಯಾಗಲಿಲ್ಲ. ನಿರ್ಜಲೀಕರಣ ಮತ್ತು ಬಿಸಿಲಿನ ತಾಪದಿಂದ ತೀವ್ರವಾಗಿ ಬಳಲಿದ್ದ ಆನೆ, ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದೆ ಎಂದು ಅರಣ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು