9:57 AM Thursday25 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು