5:03 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು