4:06 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು