5:41 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು