1:21 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು