11:51 PM Thursday8 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು