3:24 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು