7:11 PM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು