12:44 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಜಮೀನು ವಿವಾದ: ದೇಗುಲದ ಕಟ್ಟೆಯಲ್ಲಿ ಮಲಗಿದ್ದ ವ್ಯಕ್ತಿಯ ಅಮಾನುಷ ಹತ್ಯೆ; ಸಿಸಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

04/09/2024, 16:36

ಸಾಂದರ್ಭಿಕ ಚಿತ್ರ
ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ದೇವಸ್ಥಾನ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ
ಗೋಕಾಕ್​ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಇಂದು ನಡೆದಿದೆ.
ಜಮೀನಿನ ಗಡಿ ವ್ಯಾಜ್ಯದ ಹಿನ್ನೆಲೆಯಲ್ಲಿ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬವರನ್ನು ಕೊಲೆ ಮಾಡಲಾಗಿದೆ. ಭೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಡ್ಡೆಪ್ಪ ಯಲ್ಲಪ್ಪ ಬಾನಸಿ ಅವರು ಮಮದಾಪುರ ಗ್ರಾಮದ ಭೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದಾಗಲೆ ಮಾರಕಾಸ್ತ್ರದಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದ ಆವರಣದಲ್ಲಿರುವ ಸಿಸಿ ಕ್ಯಾಮರಾದಲ್ಲಿ ಭಯಾನಕ ಕೊಲೆ ದೃಶ್ಯ ಸೆರೆಯಾಗಿದೆ.
ಜಮೀನಿನ ಗಡಿಗೆ ಸಂಬಂಧಿಸಿದಂತೆ ಮಡೆಪ್ಪ ಮತ್ತು ಭೀರಪ್ಪ ಅವರ ನಡುವೆ
ಹಲವು ವರ್ಷಗಳಿಂದ ವಿವಾದ ಇತ್ತು. ಜಮೀನಿನ ಸೀಮೆಗೆ ಕಲ್ಲು ಇರಿಸಿದ್ದನ್ನು ಮಡ್ಡೆಪ್ಪ ತೆರವುಗೊಳಿಸಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭೀರಪ್ಪನಿಗೆ ಮಡ್ಡೆಪ್ಪ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಆರೋಪಿ ಭೀರಪ್ಪನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು