10:30 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಬಿಜೆಪಿ ಶಾಸಕರ ಆಪ್ತ: ಹಣ ಪಡೆಯುವ ವಿಡಿಯೋ ವೈರಲ್..!

02/04/2023, 20:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಮಗಾರಿ ಟೆಂಡರ್ ಕಮೀಷನ್ ದರ ಫಿಕ್ಸ್ ಮಾಡಿದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಪ್ತನ ಹಣ ಎಣಿಸುವ ವೀಡಿಯೊ ವೈರಲ್ ಆಗಿದೆ.
ಅಭಿವೃದ್ಧಿ ಕಾಮಗಾರಿಗಳನ್ನ ಗುತ್ತಿದೆದಾರರಿಗೆ ಕೊಡಿಸಲು ಮಧ್ಯಸ್ತಿಕೆ ವಹಿಸಿ ಕಮೀಷನ್ ದರನ್ನು ಶ್ರೀಮಂತ ಪಾಟೀಲ ಆಪ್ತ ನಾನಾಸಾಹೇಬ್ ಅವತಾಡೆ ಫಿಕ್ಸ್ ಮಾಡುವ ಕುರಿತು ಮಾತುಕತೆಯ ವೀಡಿಯೊ ಬಯಲಾಗಿದೆ.
ಅಥಣಿ ತಾಲೂಕಿನ ಕೆಂಪವಾಡದಲ್ಲಿರುವ ಶ್ರೀಮಂತ ಪಾಟೀಲ ಒಡೆತನದ ಶುಗರ್ ಫ್ಯಾಕ್ಟರಿಯಲ್ಲಿ ದರ ಫಿಕ್ಸ್ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ.


ಕಚೇರಿ ಹೊರಗಡೆ ಶಾಸಕರ ಆಪ್ತ ನಾನಾಸಾಹೇಬ್ ಅವರು ಹಣ ಪಡೆಯುವ ದೃಶ್ಯ ಇದೆ. ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಧಂದೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಸಾಕ್ಷಿ ಎಂಬಂತೆ ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಬಿಲ್ಡಿಂಗ್ ಕಾಮಗಾರಿಗೆ ಐದು ಪರ್ಸೆಂಟೇಜ್.
ಜೆಜೆಎಂ ಕಾಮಗಾರಿಗೆ ನಾಲ್ಕು ಪರ್ಸೆಂಟೇಜ್.
ರಸ್ತೆ ಕಾಮಗಾರಿಗೆ ಹತ್ತು ಪರ್ಸೆಂಟೇಜ್ ಎಂದು ಮಾತುಕತೆ ನಡೆದಿದೆ. ಚುನಾವಣೆ ಹೊತ್ತಿನಲ್ಲಿ ಈ ವೀಡಿಯೊ ಬಾರೀ ಸದ್ದು ಮಾಡುತ್ತಿದೆ

ಇತ್ತೀಚಿನ ಸುದ್ದಿ

ಜಾಹೀರಾತು