5:22 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ: ಉಭಯ ರಾಜ್ಯಗಳ ಬಸ್ ಸಂಚಾರ ರದ್ದು; ಪ್ರಯಾಣಿಕರ ಪರದಾಟ

23/02/2025, 23:04

ಬೆಳಗಾವಿ(reporterkarnataka.com): ಕೆಎಸ್ಸಾರ್ಟಿಸಿ‌ ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗಾವಿ ಭಾಗದಲ್ಲಿ ಕರವೇ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರಕ್ಕೆ ತೆರಳುವ ಎಲ್ಲ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವನ್ನು ರದ್ದುಗೊಳಿಸಲಾಗಿದೆ.
ನಿಪ್ಪಾಣಿ,ಚಿಕ್ಕೋಡಿ,ಬೆಳಗಾವಿ ಮಾರ್ಗವಾಗಿ ತೆರಳುವ ಬಸ್ ಗಳ ಸಂಚಾರ ರದ್ದುಗೊಂಡಿದೆ.
ಈ ಮಾರ್ಗವಾಗಿ ಪ್ರತಿದಿನ ದುಮಾರು 100ಕ್ಕೂ ಅಧಿಕ ಬಸ್ ಗಳು ಸಂಚಾರಿಸುತ್ತಿದ್ದವು.ಮಹಾರಾಷ್ಟ್ರದಿಂದಲೂ ಯಾವುದೇ ಬಸ್ ಗಳು ಕರ್ನಾಟಕದ ಕಡೆ ಬರುತ್ತಿಲ್ಲ.ಬಸ್ ಸಂಚಾರವನ್ನು ಮಹಾ ಸರ್ಕಾರ ಬಂದ್ ಮಾಡಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು