12:44 PM Saturday21 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನಸಾಮಾನ್ಯರಿಗೆ ತೆರಿಗೆ, ಬೆಲೆ ಏರಿಕೆಯ ಬರೆ: ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ

06/12/2024, 01:23

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಕಳೆದ ಐದಾರು ತಿಂಗಳಿನಿಂದ
ಪರಿಸರ ಸಹ್ಯ ಸಿಎನ್‌ಜಿ ದರ ಬರೋಬ್ಬರಿ ಕೆ.ಜಿಗೆ 4.50 ದರ ಏರಿಸಿದರೆ, ಇದೀಗ ಜನಸಾಮಾನ್ಯರು ಬಳಸುವ ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಕಾಂಗ್ರೆಸ್ ಆಡಳಿತದ ಸರಕಾರ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆರ್ಥಿಕ ಇಕ್ಕಟ್ಟಿನಲ್ಲಿ ಸಿಲುಕಿ ಚಡಪಡಿಸುತ್ತಿದೆ. ಅರ್ಥಿಕ ಕ್ರೋಢಿಕರಣಕ್ಕೆ ಜನರಿಗೆ ತಿಳಿಯದಂತೆ ದಿನಸಿ ವಸ್ತುಗಳ ಮೇಲೆ ತೆರಿಗೆ ಹೊರ ಹಾಕಿದರೆ, ಇದೀಗ ವಿದ್ಯುತ್ ಕ್ಷೇತ್ರಕ್ಕೆ ಕೈ ಹಾಕಿದೆ.ದರ ಏರಿಕೆಯಾದಲ್ಲಿ ಪ್ರತೀಯೊಂದು ವಸ್ತುವಿಗೂ ಮತ್ತೆ ಏರಿಕೆ ಆಗುವುದರಲ್ಲಿ ಸಂಶಯವಿಲ್ಲ.
ಜನರ ಮೇಲೆ ತೆರಿಗೆ, ಬೆಲೆ ಏರಿಕೆ ಮಾಡಿದರೂ ಯಾವುದೇ ಶಾಸಕನಿಗೂ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಮಾತ್ರ ನೀಡುತ್ತಿಲ್ಲ. ಮತದಾರರಿಗೆ ಶಾಸಕರು ಮುಖ ತೋರಿಸದಂತಹ ಸ್ಥಿತಿಯನ್ನು ಸರಕಾರ ತಂದೊಡ್ಡಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಈ ಬಾರಿ ಕನಿಷ್ಠ 1 ಕೋಟಿ ರೂ. ಬಿಡುಗಡೆಯಾಗಲೂ ಹೆಣಗಾಡುತ್ತಿದ್ದೇವೆ, ಹಾಗಾದರೆ ಬೆಲೆ ಎರಿಕೆಯಿಂದ ಬಂದ ಆದಾಯದ ಮೂಲ ಎಲ್ಲಿಗೆ ಸೋರಿಕೆಯಾಗುತ್ತಿದೆ ಎಂಬುದನ್ನು ಸರಕಾರ ಶ್ವೇತಪತ್ರದ ಹೊರಡಿಸಿ ಜನತೆಗೆ ಮಾಹಿತಿ ನೀಡಬೇಕು ಎಂದು ಶಾಸಕ ಡಾ.ಭರತ್‌ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು