5:43 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನಸಾಮಾನ್ಯರಿಗೆ ತೆರಿಗೆ, ಬೆಲೆ ಏರಿಕೆಯ ಬರೆ: ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ

06/12/2024, 01:23

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಕಳೆದ ಐದಾರು ತಿಂಗಳಿನಿಂದ
ಪರಿಸರ ಸಹ್ಯ ಸಿಎನ್‌ಜಿ ದರ ಬರೋಬ್ಬರಿ ಕೆ.ಜಿಗೆ 4.50 ದರ ಏರಿಸಿದರೆ, ಇದೀಗ ಜನಸಾಮಾನ್ಯರು ಬಳಸುವ ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಕಾಂಗ್ರೆಸ್ ಆಡಳಿತದ ಸರಕಾರ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆರ್ಥಿಕ ಇಕ್ಕಟ್ಟಿನಲ್ಲಿ ಸಿಲುಕಿ ಚಡಪಡಿಸುತ್ತಿದೆ. ಅರ್ಥಿಕ ಕ್ರೋಢಿಕರಣಕ್ಕೆ ಜನರಿಗೆ ತಿಳಿಯದಂತೆ ದಿನಸಿ ವಸ್ತುಗಳ ಮೇಲೆ ತೆರಿಗೆ ಹೊರ ಹಾಕಿದರೆ, ಇದೀಗ ವಿದ್ಯುತ್ ಕ್ಷೇತ್ರಕ್ಕೆ ಕೈ ಹಾಕಿದೆ.ದರ ಏರಿಕೆಯಾದಲ್ಲಿ ಪ್ರತೀಯೊಂದು ವಸ್ತುವಿಗೂ ಮತ್ತೆ ಏರಿಕೆ ಆಗುವುದರಲ್ಲಿ ಸಂಶಯವಿಲ್ಲ.
ಜನರ ಮೇಲೆ ತೆರಿಗೆ, ಬೆಲೆ ಏರಿಕೆ ಮಾಡಿದರೂ ಯಾವುದೇ ಶಾಸಕನಿಗೂ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಮಾತ್ರ ನೀಡುತ್ತಿಲ್ಲ. ಮತದಾರರಿಗೆ ಶಾಸಕರು ಮುಖ ತೋರಿಸದಂತಹ ಸ್ಥಿತಿಯನ್ನು ಸರಕಾರ ತಂದೊಡ್ಡಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಈ ಬಾರಿ ಕನಿಷ್ಠ 1 ಕೋಟಿ ರೂ. ಬಿಡುಗಡೆಯಾಗಲೂ ಹೆಣಗಾಡುತ್ತಿದ್ದೇವೆ, ಹಾಗಾದರೆ ಬೆಲೆ ಎರಿಕೆಯಿಂದ ಬಂದ ಆದಾಯದ ಮೂಲ ಎಲ್ಲಿಗೆ ಸೋರಿಕೆಯಾಗುತ್ತಿದೆ ಎಂಬುದನ್ನು ಸರಕಾರ ಶ್ವೇತಪತ್ರದ ಹೊರಡಿಸಿ ಜನತೆಗೆ ಮಾಹಿತಿ ನೀಡಬೇಕು ಎಂದು ಶಾಸಕ ಡಾ.ಭರತ್‌ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು