6:48 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನಸಾಮಾನ್ಯರಿಗೆ ತೆರಿಗೆ, ಬೆಲೆ ಏರಿಕೆಯ ಬರೆ: ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ

06/12/2024, 01:23

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಕಳೆದ ಐದಾರು ತಿಂಗಳಿನಿಂದ
ಪರಿಸರ ಸಹ್ಯ ಸಿಎನ್‌ಜಿ ದರ ಬರೋಬ್ಬರಿ ಕೆ.ಜಿಗೆ 4.50 ದರ ಏರಿಸಿದರೆ, ಇದೀಗ ಜನಸಾಮಾನ್ಯರು ಬಳಸುವ ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಕಾಂಗ್ರೆಸ್ ಆಡಳಿತದ ಸರಕಾರ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆರ್ಥಿಕ ಇಕ್ಕಟ್ಟಿನಲ್ಲಿ ಸಿಲುಕಿ ಚಡಪಡಿಸುತ್ತಿದೆ. ಅರ್ಥಿಕ ಕ್ರೋಢಿಕರಣಕ್ಕೆ ಜನರಿಗೆ ತಿಳಿಯದಂತೆ ದಿನಸಿ ವಸ್ತುಗಳ ಮೇಲೆ ತೆರಿಗೆ ಹೊರ ಹಾಕಿದರೆ, ಇದೀಗ ವಿದ್ಯುತ್ ಕ್ಷೇತ್ರಕ್ಕೆ ಕೈ ಹಾಕಿದೆ.ದರ ಏರಿಕೆಯಾದಲ್ಲಿ ಪ್ರತೀಯೊಂದು ವಸ್ತುವಿಗೂ ಮತ್ತೆ ಏರಿಕೆ ಆಗುವುದರಲ್ಲಿ ಸಂಶಯವಿಲ್ಲ.
ಜನರ ಮೇಲೆ ತೆರಿಗೆ, ಬೆಲೆ ಏರಿಕೆ ಮಾಡಿದರೂ ಯಾವುದೇ ಶಾಸಕನಿಗೂ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಮಾತ್ರ ನೀಡುತ್ತಿಲ್ಲ. ಮತದಾರರಿಗೆ ಶಾಸಕರು ಮುಖ ತೋರಿಸದಂತಹ ಸ್ಥಿತಿಯನ್ನು ಸರಕಾರ ತಂದೊಡ್ಡಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಈ ಬಾರಿ ಕನಿಷ್ಠ 1 ಕೋಟಿ ರೂ. ಬಿಡುಗಡೆಯಾಗಲೂ ಹೆಣಗಾಡುತ್ತಿದ್ದೇವೆ, ಹಾಗಾದರೆ ಬೆಲೆ ಎರಿಕೆಯಿಂದ ಬಂದ ಆದಾಯದ ಮೂಲ ಎಲ್ಲಿಗೆ ಸೋರಿಕೆಯಾಗುತ್ತಿದೆ ಎಂಬುದನ್ನು ಸರಕಾರ ಶ್ವೇತಪತ್ರದ ಹೊರಡಿಸಿ ಜನತೆಗೆ ಮಾಹಿತಿ ನೀಡಬೇಕು ಎಂದು ಶಾಸಕ ಡಾ.ಭರತ್‌ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು