9:41 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ತೆರಿಗೆ ವಂಚನೆ, ದೇಶದ ಗೌಪ್ಯ ಮಾಹಿತಿ ಸೋರಿಕೆ: ಚೀನಾದ ಕಂಪನಿಗಳ ಮೇಲೆ ಇಡಿ ದಾಳಿ

06/07/2022, 12:11

ಹೊಸದಿಲ್ಲಿ(reporterkarnataka.com): ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೇಶದಲ್ಲಿನ ಚೀನಾದ ಟೆಲಿಕಾಂ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬೆನ್ನೆಲ್ಲೇ ಇದೀಗ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ತೆರಿಗೆ ವಂಚನೆ ಮತ್ತು ದೇಶದ ಗೌಪ್ಯ ವಿಚಾರಗಳನ್ನು ಸೋರಿಕೆ ಮಾಡುತ್ತಿರುವ ಆರೋಪದ ಮೇಲೆ ಚೀನಾಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶ, ಮಧ್ಯಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿನ ಚೀನಾ ಕಂಪನಿಗಳ ಮೇಲೆ ರೈಡ್​ ನಡೆಸಿ ಪರಿಶೀಲನೆಗೆ ಒಳಪಡಿಸಲಾಗಿದೆ.

ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿರುವ ಚೀನಾ ಮೂಲದ ಟೆಲಿಕಾಂ ಕಂಪನಿಗಳ ಆದಾಯ ವಿವರ ಸಲ್ಲಿಕೆಯಲ್ಲಿ ಲೋಪದೋಷಗಳು ಕಂಡು ಬಂದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಬಿಸಿ ಮುಟ್ಟಿಸಿದೆ.

ಕಳೆದ ಕೆಲ ವರ್ಷಗಳಿಂದ ಚೀನಿ ಮೂಲದ ಮೊಬೈಲ್​ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದರೂ, ನಷ್ಟವನ್ನು ತೋರಿಸುತ್ತಿವೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದಾಯ ತೆರಿಗೆಯಿಂದ ನುಣುಚಿಕೊಳ್ಳಲು ಕಂಪನಿಗಳ ಈ ರೀತಿ ಮೋಸ ಮಾಡುತ್ತಿವೆ ಎಂಬ ಅನುಮಾನದ ಮೇಲೆ ತನಿಖೆಗೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು