3:24 PM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ; 25ಕ್ಕೂ ಹೆಚ್ಚು ಬಲಿ

22/04/2025, 20:50

ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ
ಮಂಜುನಾಥ್ ಎಂಬವರು ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರು
ಕುಟುಂಬ ಸಮೇತರಾಗಿ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಮಧ್ಯಾಹ್ನ ಉಗ್ರರ ದಾಳಿ ನಡೆಸಿದ್ದರು.
ಪಹಲ್ಗಾಮ್‌ನ ಬೈಸರನ್ ಕಾಡು ಪ್ರದೇಶದಲ್ಲಿ ಟ್ರಕ್ಕಿಂಗ್ ಹೋಗುತ್ತಿದ್ದ ಮಹಿಳಾ ಪ್ರವಾಸಿಗರೊಬ್ಬರು ಪೊಲೀಸರಿಗೆ ಕರೆ ಮಾಡಿ ಭಯೋತ್ಪಾದಕರಿಂದ ದಾಳಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಚಾರಣಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದರು ಎಂದು ಅವರು ಮಾಹಿತಿ ನೀಡಿದ್ದರು. ಒಂದು ವರ್ಷದ ನಂತರ ನಡೆದ ಅತ್ಯಂತ ಭೀಕರ ದಾಳಿಯಾಗಿದೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ತಕ್ಷಣ
ಕಾಶ್ಮೀರಕ್ಕೆ ತೆರಳಿದ್ದಾರೆ. ಈ ಮಧ್ಯೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್‌ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು