8:36 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ; 25ಕ್ಕೂ ಹೆಚ್ಚು ಬಲಿ

22/04/2025, 20:50

ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ
ಮಂಜುನಾಥ್ ಎಂಬವರು ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರು
ಕುಟುಂಬ ಸಮೇತರಾಗಿ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಮಧ್ಯಾಹ್ನ ಉಗ್ರರ ದಾಳಿ ನಡೆಸಿದ್ದರು.
ಪಹಲ್ಗಾಮ್‌ನ ಬೈಸರನ್ ಕಾಡು ಪ್ರದೇಶದಲ್ಲಿ ಟ್ರಕ್ಕಿಂಗ್ ಹೋಗುತ್ತಿದ್ದ ಮಹಿಳಾ ಪ್ರವಾಸಿಗರೊಬ್ಬರು ಪೊಲೀಸರಿಗೆ ಕರೆ ಮಾಡಿ ಭಯೋತ್ಪಾದಕರಿಂದ ದಾಳಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಚಾರಣಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದರು ಎಂದು ಅವರು ಮಾಹಿತಿ ನೀಡಿದ್ದರು. ಒಂದು ವರ್ಷದ ನಂತರ ನಡೆದ ಅತ್ಯಂತ ಭೀಕರ ದಾಳಿಯಾಗಿದೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ತಕ್ಷಣ
ಕಾಶ್ಮೀರಕ್ಕೆ ತೆರಳಿದ್ದಾರೆ. ಈ ಮಧ್ಯೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್‌ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು