11:23 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು ಮಂದಿ ಸಾವು; ಹಲವರಿಗೆ ಗಾಯ

22/04/2025, 20:28

ಶ್ರೀನಗರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಶಿವಮೊಗ್ಗದ ಉದ್ಯಮಿ ಸೇರಿದಂತೆ 5ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ
ಮಂಜುನಾಥ್ ಎಂಬವರು ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರು
ಕುಟುಂಬ ಸಮೇತರಾಗಿ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಮಧ್ಯಾಹ್ನ ಉಗ್ರರ ದಾಳಿ ನಡೆಸಿದ್ದರು.
ಪಹಲ್ಗಾಮ್‌ನ ಬೈಸರನ್ ಕಾಡು ಪ್ರದೇಶದಲ್ಲಿ ಟ್ರಕ್ಕಿಂಗ್ ಹೋಗುತ್ತಿದ್ದ ಮಹಿಳಾ ಪ್ರವಾಸಿಗರೊಬ್ಬರು ಪೊಲೀಸರಿಗೆ ಕರೆ ಮಾಡಿ ಭಯೋತ್ಪಾದಕರಿಂದ ದಾಳಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಚಾರಣಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದರು ಎಂದು ಅವರು ಮಾಹಿತಿ ನೀಡಿದ್ದರು. ಒಂದು ವರ್ಷದ ನಂತರ ನಡೆದ ಅತ್ಯಂತ ಭೀಕರ ದಾಳಿಯಾಗಿದೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಐದಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಇದುವರೆಗೆ ಕೇವಲ ಇಬ್ಬರ ಸಾವಿನ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಘಟನೆ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ತಕ್ಷಣ
ಕಾಶ್ಮೀರಕ್ಕೆ ತೆರಳಿದ್ದಾರೆ. ಈ ಮಧ್ಯೆ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆಗೆ ತೆರಳಿದ್ದ ಜಮ್ಮು-ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಶ್ರೀನಗರಕ್ಕೆ ವಾಪಸ್‌ ಆಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು