11:02 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:…

ಇತ್ತೀಚಿನ ಸುದ್ದಿ

ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುತ್ತದೆ: ಶಾಸಕ ಡಾ. ಭರತ್ ಶೆಟ್ಟಿ

24/12/2025, 22:04

ಸುರತ್ಕಲ್(reporterkarnataka.com): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶ ಭಾಷಣ ಮಸೂದೆ ಕರಾಳ ಮುಖವನ್ನು ಹೊಂದಿದ್ದು ಸಾಮಾಜಿಕ ಜಾಲತಾಣ ಸೇರಿದಂತೆ, ಪತ್ರಕರ್ತರು, ದೇಶಭಕ್ತಿಯ ಘೋಷಣೆ ಮೊಳಗಿಸುವವರನ್ನು, ಹಿಂದೂ ಧರ್ಮದ ದೇವರ ಹೆಸರನ್ನು ಘೋಷಣೆ ಮಾಡುವವರನ್ನು ಕೂಡ ಬಿಡದೆ ಕೇಸು ದಾಖಲಿಸಿ ನೇರವಾಗಿ ಜೈಲಿಗೆ ಕಟ್ಟುವ ಅಧಿಕಾರವನ್ನು ಪೊಲೀಸರಿಗೆ ಕೊಡಲಾಗಿದೆ. ಯಾವುದೇ ಪ್ರತಿಭಟನೆಗೆ, ಇಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಬರುವ ಪ್ರಮುಖ ದಿಕ್ಸೂಚಿ ಭಾಷಣಗಾರರನ್ನು ಕಾರ್ಯಕ್ರಮ ನಡೆಯುವ ಮುನ್ನವೇ ಪೊಲೀಸರು ಕೇಸು ದಾಖಲಿಸಿ ಬಾರದಂತೆ ತಡೆಯಲು ಸ್ವಾತಂತ್ರ್ಯ ನೀಡಲಾಗಿದೆ. ಇದೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಒಂದು ವರ್ಗವನ್ನು ಸಂತುಷ್ಟಗೊಳಿಸುವ ಕಾಯಿದೆಯಾಗಿದ್ದು ಇದನ್ನು ಬಿಜೆಪಿ ಪಕ್ಷ ವಿರೋಧಿಸುತ್ತಲೇ ಬರುತ್ತದೆ ಎಂದು ಘೋಷಿಸಿದರಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಈ ಕಾಯ್ದೆ ಬಳಕೆಯಾದರೆ ಅವರ ಜೊತೆಯಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು. ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ದಿನಕರ್ ಇಡ್ಯಾ, ಸುನಿಲ್ ಕುಳಾಯಿ,ನಿಕಟ ಪೂರ್ವ ಜನಪ್ರತಿನಿದಿಗಳು ಬಿಜೆಪಿ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತರು, ಮತ್ತು ಸಾರ್ವಜನಿಕರೂ ಉಪಸ್ಥಿತರಿದ್ದರು. ಪುಷ್ಪರಾಜ್ ಮುಕ್ಕಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು