4:41 AM Tuesday1 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುತ್ತದೆ: ಶಾಸಕ ಡಾ. ಭರತ್ ಶೆಟ್ಟಿ

24/12/2025, 22:04

ಸುರತ್ಕಲ್(reporterkarnataka.com): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶ ಭಾಷಣ ಮಸೂದೆ ಕರಾಳ ಮುಖವನ್ನು ಹೊಂದಿದ್ದು ಸಾಮಾಜಿಕ ಜಾಲತಾಣ ಸೇರಿದಂತೆ, ಪತ್ರಕರ್ತರು, ದೇಶಭಕ್ತಿಯ ಘೋಷಣೆ ಮೊಳಗಿಸುವವರನ್ನು, ಹಿಂದೂ ಧರ್ಮದ ದೇವರ ಹೆಸರನ್ನು ಘೋಷಣೆ ಮಾಡುವವರನ್ನು ಕೂಡ ಬಿಡದೆ ಕೇಸು ದಾಖಲಿಸಿ ನೇರವಾಗಿ ಜೈಲಿಗೆ ಕಟ್ಟುವ ಅಧಿಕಾರವನ್ನು ಪೊಲೀಸರಿಗೆ ಕೊಡಲಾಗಿದೆ. ಯಾವುದೇ ಪ್ರತಿಭಟನೆಗೆ, ಇಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಬರುವ ಪ್ರಮುಖ ದಿಕ್ಸೂಚಿ ಭಾಷಣಗಾರರನ್ನು ಕಾರ್ಯಕ್ರಮ ನಡೆಯುವ ಮುನ್ನವೇ ಪೊಲೀಸರು ಕೇಸು ದಾಖಲಿಸಿ ಬಾರದಂತೆ ತಡೆಯಲು ಸ್ವಾತಂತ್ರ್ಯ ನೀಡಲಾಗಿದೆ. ಇದೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಒಂದು ವರ್ಗವನ್ನು ಸಂತುಷ್ಟಗೊಳಿಸುವ ಕಾಯಿದೆಯಾಗಿದ್ದು ಇದನ್ನು ಬಿಜೆಪಿ ಪಕ್ಷ ವಿರೋಧಿಸುತ್ತಲೇ ಬರುತ್ತದೆ ಎಂದು ಘೋಷಿಸಿದರಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಈ ಕಾಯ್ದೆ ಬಳಕೆಯಾದರೆ ಅವರ ಜೊತೆಯಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು. ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ದಿನಕರ್ ಇಡ್ಯಾ, ಸುನಿಲ್ ಕುಳಾಯಿ,ನಿಕಟ ಪೂರ್ವ ಜನಪ್ರತಿನಿದಿಗಳು ಬಿಜೆಪಿ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತರು, ಮತ್ತು ಸಾರ್ವಜನಿಕರೂ ಉಪಸ್ಥಿತರಿದ್ದರು. ಪುಷ್ಪರಾಜ್ ಮುಕ್ಕಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು