4:42 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ದ್ವೇಷ ಭಾಷಣ ವಿರೋಧಿ ಮಸೂದೆ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುತ್ತದೆ: ಶಾಸಕ ಡಾ. ಭರತ್ ಶೆಟ್ಟಿ

24/12/2025, 22:04

ಸುರತ್ಕಲ್(reporterkarnataka.com): ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದೇಶ ಭಾಷಣ ವಿರೋಧಿ ಮಸೂದೆಯನ್ನು ವಿಪಕ್ಷಗಳ ಹಾಗೂ ಪತ್ರಕರ್ತರ ಧ್ವನಿಯನ್ನು ಅಡಗಿಸಲು ತರುತ್ತಿದೆ. ಕಾಂಗ್ರೆಸ್ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವವರ ಮೇಲೆಯೂ ಈ ಅಸ್ತ್ರವನ್ನು ಬಳಸಲು ಮುಂದಾಗಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಅನುಮೋದನೆ ನೀಡಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ದ್ವೇಷ ಭಾಷಣ ವಿರೋಧಿ ಮಸೂದೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶ ಭಾಷಣ ಮಸೂದೆ ಕರಾಳ ಮುಖವನ್ನು ಹೊಂದಿದ್ದು ಸಾಮಾಜಿಕ ಜಾಲತಾಣ ಸೇರಿದಂತೆ, ಪತ್ರಕರ್ತರು, ದೇಶಭಕ್ತಿಯ ಘೋಷಣೆ ಮೊಳಗಿಸುವವರನ್ನು, ಹಿಂದೂ ಧರ್ಮದ ದೇವರ ಹೆಸರನ್ನು ಘೋಷಣೆ ಮಾಡುವವರನ್ನು ಕೂಡ ಬಿಡದೆ ಕೇಸು ದಾಖಲಿಸಿ ನೇರವಾಗಿ ಜೈಲಿಗೆ ಕಟ್ಟುವ ಅಧಿಕಾರವನ್ನು ಪೊಲೀಸರಿಗೆ ಕೊಡಲಾಗಿದೆ. ಯಾವುದೇ ಪ್ರತಿಭಟನೆಗೆ, ಇಂದು ಧಾರ್ಮಿಕ ಕಾರ್ಯಕ್ರಮಗಳಿಗೆ ಬರುವ ಪ್ರಮುಖ ದಿಕ್ಸೂಚಿ ಭಾಷಣಗಾರರನ್ನು ಕಾರ್ಯಕ್ರಮ ನಡೆಯುವ ಮುನ್ನವೇ ಪೊಲೀಸರು ಕೇಸು ದಾಖಲಿಸಿ ಬಾರದಂತೆ ತಡೆಯಲು ಸ್ವಾತಂತ್ರ್ಯ ನೀಡಲಾಗಿದೆ. ಇದೆಲ್ಲಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಒಂದು ವರ್ಗವನ್ನು ಸಂತುಷ್ಟಗೊಳಿಸುವ ಕಾಯಿದೆಯಾಗಿದ್ದು ಇದನ್ನು ಬಿಜೆಪಿ ಪಕ್ಷ ವಿರೋಧಿಸುತ್ತಲೇ ಬರುತ್ತದೆ ಎಂದು ಘೋಷಿಸಿದರಲ್ಲದೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಈ ಕಾಯ್ದೆ ಬಳಕೆಯಾದರೆ ಅವರ ಜೊತೆಯಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು. ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ದಿನಕರ್ ಇಡ್ಯಾ, ಸುನಿಲ್ ಕುಳಾಯಿ,ನಿಕಟ ಪೂರ್ವ ಜನಪ್ರತಿನಿದಿಗಳು ಬಿಜೆಪಿ ಅನನ್ಯ ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತರು, ಮತ್ತು ಸಾರ್ವಜನಿಕರೂ ಉಪಸ್ಥಿತರಿದ್ದರು. ಪುಷ್ಪರಾಜ್ ಮುಕ್ಕಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು