5:30 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ: ಬಸವರಾಜ ಬೊಮ್ಮಾಯಿ

24/12/2025, 21:57

ಕಲಬುರಗಿ(reporterkarnataka.com): ತಾವು ಸಿಎಂ ಆಗಿದ್ದಾಗ ಕಲಬುರ್ಗಿ ಜಿಲ್ಲೆಯಲ್ಲಿ ಲಕ್ಷ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಮಹತ್ವದ ಪಿಎಂ ಮಿತ್ರ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಗೆ ಅಡಿಗಲ್ಲು ಹಾಕಲಾಗಿದೆ. ಆದರೆ, ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ ಯೋಜನೆ ಸಾಕಾರಗೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದರು.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖವಾಗಿ ರಾಜ್ಯ ಸರ್ಕಾರದ ಆಸಕ್ತಿ ಮೇರೆಗೆ ಆ್ಯಂಕರ್ ಇಂಡಸ್ಟ್ರೀಸ್ ಬರಬೇಕಿತ್ತು. ಭೂಮಿ ಸಹ ನೀಡಲಾಗಿದ್ದರೂ ಜತೆಗೆ ಕಾರ್ಯಾರಂಭಕ್ಕೆ ಅಂತಹ ಅಡ್ಡಿ ಆತಂಕಗಳಿರಲಿಲ್ಲ. ಈ ಕುರಿತು ಈಗಾಗಲೇ ರಾಜ್ಯದ ಜವಳಿ ಸಚಿವ ಶಿವಾನಂದ ಪಾಟೀಲ್ ಅವರೊಂದಿಗೆ ಮಾತನಾಡಲಾಗಿದೆ. ಪ್ರಮುಖವಾಗಿ ತಾವು ಸಂಸತ್ತಿನ ಕಾರ್ಮಿಕ, ಜವಳಿ ಮತ್ತು ಕೌಶಾಲ್ಯಾಭಿವೃದ್ದಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದು, ಹೀಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ಇದಕ್ಕೆ ಸಂಬಂಧಸಿದಂತೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಶಿವಾನಂದ ಪಾಟೀಲ್, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಕೇಂದ್ರದ ಜವಳಿ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಇಲ್ಲಿಯವರೆಗೆ ಆಗಿರುವ ಕಾರ್ಯ ಪರಿಶೀಲನೆ ಜತೆಗೆ ಮುಂದೆ ಆಗಬೇಕಿರುವ ಕಾರ್ಯಗಳ ಕುರಿತಾಗಿ ಅವಲೋಕನ ನಡೆಸಲಾಗುವುದು. ರಾಜ್ಯ ಸರ್ಕಾರ ತನ್ನ ಕಾರ್ಯಗಳನ್ನು ಪೂರ್ಣಗೊಳಿಸಿದ್ದಲ್ಲಿ ಕೇಂದ್ರ ಸರ್ಕಾರ ತನ್ನೆಲ್ಲ ಸೌಕರ್ಯಗಳನ್ನು ಕಲ್ಪಿಸಿ ಯೋಜನೆ ಸಂಪೂರ್ಣ ಕಾರ್ಯಕ್ಕೆ ಕೈ ಜೋಡಿಸುತ್ತದೆ ಎಂದು ತಿಳಿಸಿದರು.

*ಎಲ್ಲೇ ಮೀರಿದ ಅಕ್ರಮ:*
ರಾಜ್ಯದಲ್ಲಿ ಅಕ್ರಮಗಳು ಸಹ ವ್ಯಾಪಕಗೊಂಡು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಅಕ್ರಮ ಮದ್ಯ ಎಲ್ಲೆಡೆ ಮಾರಾಟ ಒಂದೇಡೆಯಾದರೆ, ಮಟಕಾ ಜೂಜಾಟಕ್ಕೆ ಅಂಕೆ ಇಲ್ಲದಂತಾಗಿದೆ. ಪೊಲೀಸರೇ ಮುಂದೆ ನಿಂತು ಇದನ್ನೆಲ ಮಾಡಿಸುತ್ತಿದ್ದಾರೆ ಹಾಗೂ ದಂಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವರ್ಗಾವಣೆಗೆ ಹಣ ಕ್ರೋಢಿಕರಿಸಲು ಪೊಲೀಸರು ಇಂತಹ ಅಕ್ರಮಗಳನ್ನು ತಡೆಯಲು ಮುಂದಾಗುತ್ತಿಲ್ಲ ಎಂದು ಬೊಮ್ಮಾಯಿ ಕಿಡಿ ಕಾರಿದರು.

ಕೇಂದ್ರದ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನುದಾನ ಬಂದಿಲ್ಲ ಹಾಗೂ ಜೆಜೆಎಂ ಕಾಮಗಾರಿಗೂ ಹಣ ಬಂದಿಲ್ಲ ಎನ್ನಲಾಗುತ್ತದೆ. ಆದರೆ ವಾಸ್ತವವಾಗಿ ಅನುದಾನ ಬಳಕೆ ಪ್ರಮಾಣ ಪತ್ರ ಸಮರ್ಪಕವಾಗಿ ಸಲ್ಲಿಸಿಲ್ಲ ಎಂದು ಮಾಜಿ ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಡಾ. ಉಮೇಶ ಜಾಧವ್, ಶಾಸಕರಾದ ಬಸವರಾಜ ಮತ್ತಿಮಡು, ಶರಣು ಸಲಗರ, ಡಾ. ಸಿದ್ದು ಪಾಟೀಲ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಿಜೆಪಿ ಕಲಬುರಗಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಸೇರಿದಂತೆ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು