11:34 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ  ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ 

14/06/2021, 14:46

ಅಮರೇಶ್  ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ ‘100 ನಾಟೌಟ್’ ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಆನಂದ ಕುಂಬಾರ ಮಾತನಾಡಿ,  ಕೊವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಹೈರಾಣವಾಗಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆಯೇ ಸಂವೇದನಾರಹಿತ ಕೇಂದ್ರ ಸರಕಾರದ ನೀತಿಗಳಿಂದ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ದಿನೇ ದಿನೇ ಏರುತ್ತಿದೆ. ಬಹಳ ಕಡೆ ಲೀಟರ್ ಒಂದರ ಬೆಲೆ ನೂರರ ಗಡಿ ದಾಟಿದೆ. ಇನ್ನುಳಿದ ಕಡೆ ನೂರರ ಹೊಸ್ತಿಲಲ್ಲಿದೆ. ಈ ಬೆಲೆ ಏರಿಕೆಯಿಂದಾಗಿ ಮನೆಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಕಳೆದ 13 ತಿಂಗಳುಗಳಲ್ಲಿ ಪೆಟ್ರೋಕ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ ತಲಾ ರೂಪಾಯಿ 25.72 ಮತ್ತು ರೂಪಾಯಿ 23.93 ರಷ್ಟು ಏರಿಕೆಯಾಗಿವೆ. ಕಳೆದ 5 ತಿಂಗಳುಗಳಲ್ಲಿ 43 ಬಾರಿ ದರಗಳನ್ನು ಏರಿಕೆಯಾಗಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮುಖಂಡರು ಪಿರಸಾಬ ಪಂಚಮ್, ಆದಪ್ಪ ಮೇಟಿ, ದೊಡ್ಡಪ್ಪ ಚಿಗರಿ, ಯಮನಪ್ಪ ಕಟ್ಟೀಮನಿ,  ಸಣ್ಣಗದ್ದೆಪ್ಪ ಚಿಗರಿ,ಮಲ್ಲರಡ್ಡೆಪ್ಪ ದೊಡ್ಡಮನಿ, ಮರಿಯಪ್ಪ ಕಟ್ಟಿಮನಿ, ಹನುಮಂತ ಕುರಿ, ಉಮೇಶ ಚವ್ಹಾಣ, ಖೇಮಣ್ಣ ರಾಠೋಡ, ಗೋವಿಂದ ಪವಾರ್, ಅಮರೇಶ ಮೇಟಿ, ದೇವರೇಡ್ಡಿ ಮೇಟಿ, ಗದ್ದೆಪ್ಪ ಕಟ್ಟಿಮನಿ, ಗದ್ದೆಪ್ಪ ಗೌಂಡಿ, ಶ್ರವಣಕುಮಾರ ದಾಸರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು