11:23 AM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ  ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ 

14/06/2021, 14:46

ಅಮರೇಶ್  ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ ‘100 ನಾಟೌಟ್’ ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಆನಂದ ಕುಂಬಾರ ಮಾತನಾಡಿ,  ಕೊವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಹೈರಾಣವಾಗಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆಯೇ ಸಂವೇದನಾರಹಿತ ಕೇಂದ್ರ ಸರಕಾರದ ನೀತಿಗಳಿಂದ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ದಿನೇ ದಿನೇ ಏರುತ್ತಿದೆ. ಬಹಳ ಕಡೆ ಲೀಟರ್ ಒಂದರ ಬೆಲೆ ನೂರರ ಗಡಿ ದಾಟಿದೆ. ಇನ್ನುಳಿದ ಕಡೆ ನೂರರ ಹೊಸ್ತಿಲಲ್ಲಿದೆ. ಈ ಬೆಲೆ ಏರಿಕೆಯಿಂದಾಗಿ ಮನೆಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಕಳೆದ 13 ತಿಂಗಳುಗಳಲ್ಲಿ ಪೆಟ್ರೋಕ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ ತಲಾ ರೂಪಾಯಿ 25.72 ಮತ್ತು ರೂಪಾಯಿ 23.93 ರಷ್ಟು ಏರಿಕೆಯಾಗಿವೆ. ಕಳೆದ 5 ತಿಂಗಳುಗಳಲ್ಲಿ 43 ಬಾರಿ ದರಗಳನ್ನು ಏರಿಕೆಯಾಗಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮುಖಂಡರು ಪಿರಸಾಬ ಪಂಚಮ್, ಆದಪ್ಪ ಮೇಟಿ, ದೊಡ್ಡಪ್ಪ ಚಿಗರಿ, ಯಮನಪ್ಪ ಕಟ್ಟೀಮನಿ,  ಸಣ್ಣಗದ್ದೆಪ್ಪ ಚಿಗರಿ,ಮಲ್ಲರಡ್ಡೆಪ್ಪ ದೊಡ್ಡಮನಿ, ಮರಿಯಪ್ಪ ಕಟ್ಟಿಮನಿ, ಹನುಮಂತ ಕುರಿ, ಉಮೇಶ ಚವ್ಹಾಣ, ಖೇಮಣ್ಣ ರಾಠೋಡ, ಗೋವಿಂದ ಪವಾರ್, ಅಮರೇಶ ಮೇಟಿ, ದೇವರೇಡ್ಡಿ ಮೇಟಿ, ಗದ್ದೆಪ್ಪ ಕಟ್ಟಿಮನಿ, ಗದ್ದೆಪ್ಪ ಗೌಂಡಿ, ಶ್ರವಣಕುಮಾರ ದಾಸರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು