7:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ  ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ 

14/06/2021, 14:46

ಅಮರೇಶ್  ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ ‘100 ನಾಟೌಟ್’ ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಆನಂದ ಕುಂಬಾರ ಮಾತನಾಡಿ,  ಕೊವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಹೈರಾಣವಾಗಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆಯೇ ಸಂವೇದನಾರಹಿತ ಕೇಂದ್ರ ಸರಕಾರದ ನೀತಿಗಳಿಂದ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ದಿನೇ ದಿನೇ ಏರುತ್ತಿದೆ. ಬಹಳ ಕಡೆ ಲೀಟರ್ ಒಂದರ ಬೆಲೆ ನೂರರ ಗಡಿ ದಾಟಿದೆ. ಇನ್ನುಳಿದ ಕಡೆ ನೂರರ ಹೊಸ್ತಿಲಲ್ಲಿದೆ. ಈ ಬೆಲೆ ಏರಿಕೆಯಿಂದಾಗಿ ಮನೆಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಕಳೆದ 13 ತಿಂಗಳುಗಳಲ್ಲಿ ಪೆಟ್ರೋಕ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ ತಲಾ ರೂಪಾಯಿ 25.72 ಮತ್ತು ರೂಪಾಯಿ 23.93 ರಷ್ಟು ಏರಿಕೆಯಾಗಿವೆ. ಕಳೆದ 5 ತಿಂಗಳುಗಳಲ್ಲಿ 43 ಬಾರಿ ದರಗಳನ್ನು ಏರಿಕೆಯಾಗಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮುಖಂಡರು ಪಿರಸಾಬ ಪಂಚಮ್, ಆದಪ್ಪ ಮೇಟಿ, ದೊಡ್ಡಪ್ಪ ಚಿಗರಿ, ಯಮನಪ್ಪ ಕಟ್ಟೀಮನಿ,  ಸಣ್ಣಗದ್ದೆಪ್ಪ ಚಿಗರಿ,ಮಲ್ಲರಡ್ಡೆಪ್ಪ ದೊಡ್ಡಮನಿ, ಮರಿಯಪ್ಪ ಕಟ್ಟಿಮನಿ, ಹನುಮಂತ ಕುರಿ, ಉಮೇಶ ಚವ್ಹಾಣ, ಖೇಮಣ್ಣ ರಾಠೋಡ, ಗೋವಿಂದ ಪವಾರ್, ಅಮರೇಶ ಮೇಟಿ, ದೇವರೇಡ್ಡಿ ಮೇಟಿ, ಗದ್ದೆಪ್ಪ ಕಟ್ಟಿಮನಿ, ಗದ್ದೆಪ್ಪ ಗೌಂಡಿ, ಶ್ರವಣಕುಮಾರ ದಾಸರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು