4:14 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ  ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ 

14/06/2021, 14:46

ಅಮರೇಶ್  ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ ‘100 ನಾಟೌಟ್’ ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಆನಂದ ಕುಂಬಾರ ಮಾತನಾಡಿ,  ಕೊವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಹೈರಾಣವಾಗಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆಯೇ ಸಂವೇದನಾರಹಿತ ಕೇಂದ್ರ ಸರಕಾರದ ನೀತಿಗಳಿಂದ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ದಿನೇ ದಿನೇ ಏರುತ್ತಿದೆ. ಬಹಳ ಕಡೆ ಲೀಟರ್ ಒಂದರ ಬೆಲೆ ನೂರರ ಗಡಿ ದಾಟಿದೆ. ಇನ್ನುಳಿದ ಕಡೆ ನೂರರ ಹೊಸ್ತಿಲಲ್ಲಿದೆ. ಈ ಬೆಲೆ ಏರಿಕೆಯಿಂದಾಗಿ ಮನೆಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಕಳೆದ 13 ತಿಂಗಳುಗಳಲ್ಲಿ ಪೆಟ್ರೋಕ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ ತಲಾ ರೂಪಾಯಿ 25.72 ಮತ್ತು ರೂಪಾಯಿ 23.93 ರಷ್ಟು ಏರಿಕೆಯಾಗಿವೆ. ಕಳೆದ 5 ತಿಂಗಳುಗಳಲ್ಲಿ 43 ಬಾರಿ ದರಗಳನ್ನು ಏರಿಕೆಯಾಗಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮುಖಂಡರು ಪಿರಸಾಬ ಪಂಚಮ್, ಆದಪ್ಪ ಮೇಟಿ, ದೊಡ್ಡಪ್ಪ ಚಿಗರಿ, ಯಮನಪ್ಪ ಕಟ್ಟೀಮನಿ,  ಸಣ್ಣಗದ್ದೆಪ್ಪ ಚಿಗರಿ,ಮಲ್ಲರಡ್ಡೆಪ್ಪ ದೊಡ್ಡಮನಿ, ಮರಿಯಪ್ಪ ಕಟ್ಟಿಮನಿ, ಹನುಮಂತ ಕುರಿ, ಉಮೇಶ ಚವ್ಹಾಣ, ಖೇಮಣ್ಣ ರಾಠೋಡ, ಗೋವಿಂದ ಪವಾರ್, ಅಮರೇಶ ಮೇಟಿ, ದೇವರೇಡ್ಡಿ ಮೇಟಿ, ಗದ್ದೆಪ್ಪ ಕಟ್ಟಿಮನಿ, ಗದ್ದೆಪ್ಪ ಗೌಂಡಿ, ಶ್ರವಣಕುಮಾರ ದಾಸರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು