5:39 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ  ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ 

14/06/2021, 14:46

ಅಮರೇಶ್  ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ ‘100 ನಾಟೌಟ್’ ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಆನಂದ ಕುಂಬಾರ ಮಾತನಾಡಿ,  ಕೊವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಹೈರಾಣವಾಗಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆಯೇ ಸಂವೇದನಾರಹಿತ ಕೇಂದ್ರ ಸರಕಾರದ ನೀತಿಗಳಿಂದ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ದಿನೇ ದಿನೇ ಏರುತ್ತಿದೆ. ಬಹಳ ಕಡೆ ಲೀಟರ್ ಒಂದರ ಬೆಲೆ ನೂರರ ಗಡಿ ದಾಟಿದೆ. ಇನ್ನುಳಿದ ಕಡೆ ನೂರರ ಹೊಸ್ತಿಲಲ್ಲಿದೆ. ಈ ಬೆಲೆ ಏರಿಕೆಯಿಂದಾಗಿ ಮನೆಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಕಳೆದ 13 ತಿಂಗಳುಗಳಲ್ಲಿ ಪೆಟ್ರೋಕ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ ತಲಾ ರೂಪಾಯಿ 25.72 ಮತ್ತು ರೂಪಾಯಿ 23.93 ರಷ್ಟು ಏರಿಕೆಯಾಗಿವೆ. ಕಳೆದ 5 ತಿಂಗಳುಗಳಲ್ಲಿ 43 ಬಾರಿ ದರಗಳನ್ನು ಏರಿಕೆಯಾಗಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮುಖಂಡರು ಪಿರಸಾಬ ಪಂಚಮ್, ಆದಪ್ಪ ಮೇಟಿ, ದೊಡ್ಡಪ್ಪ ಚಿಗರಿ, ಯಮನಪ್ಪ ಕಟ್ಟೀಮನಿ,  ಸಣ್ಣಗದ್ದೆಪ್ಪ ಚಿಗರಿ,ಮಲ್ಲರಡ್ಡೆಪ್ಪ ದೊಡ್ಡಮನಿ, ಮರಿಯಪ್ಪ ಕಟ್ಟಿಮನಿ, ಹನುಮಂತ ಕುರಿ, ಉಮೇಶ ಚವ್ಹಾಣ, ಖೇಮಣ್ಣ ರಾಠೋಡ, ಗೋವಿಂದ ಪವಾರ್, ಅಮರೇಶ ಮೇಟಿ, ದೇವರೇಡ್ಡಿ ಮೇಟಿ, ಗದ್ದೆಪ್ಪ ಕಟ್ಟಿಮನಿ, ಗದ್ದೆಪ್ಪ ಗೌಂಡಿ, ಶ್ರವಣಕುಮಾರ ದಾಸರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು