2:04 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ತಲೆಖಾನ: ಗಂಡುಗಲಿ ಕುಮಾರರಾಮ ಜಯಂತಿ ಆಚರಣೆ: ಸಮಾಧಿ ಸ್ಥಳದಲ್ಲಿ ಭಾವಪೂರ್ಣ ನುಡಿನಮನ

25/08/2021, 09:43

ವಿರುಪಾಕ್ಷ ಸ್ವಾಮಿ ಸಾಲುಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮುಸ್ಕಿ ತಾಲೂಕಿನ ತಲೆಕಾನ್ ಗ್ರಾಮದಲ್ಲಿ ಸುಲ್ತಾನರಿಗೆಸಿಂಹಸ್ವಪ್ನವಾಗಿ 64 ಯುದ್ಧ ತಂತ್ರ ನಿಪುಣನಾಗಿದ್ದ ಗಂಡುಗಲಿ ಕುಮಾರರಾಮ ಅವರ ಜಯಂತಿ ಆಚರಿಸಲಾಯಿತು.

ದಕ್ಷಿಣ ಭಾರತದಲ್ಲಿ ಶೌರ್ಯ ಪರಾಕ್ರಮ ಮೆರೆದ, ಕನ್ನಡ ನಾಡಿನ ನೆಲ- ಜಲ-  ಭಾಷೆ- ಸಂಸ್ಕೃತಿ ಉಳಿಸಲು ಹೋರಾಡಿದ ವೈರಿಗಳಿಗೆ ಸಿಂಹಸ್ವಪ್ನ ನಾದ ಗಂಡುಗಲಿ ಕುಮಾರರಾಮ ಜಯಂತಿಯನ್ನು ಪೂಜ್ಯ ಆತ್ಮಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ತಲೆಖಾನ್ ಗ್ರಾಮದಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಸ್ಕಿಹಾಳ ವಾಲ್ಮೀಕಿ ಮಠದ ಶ್ರೀ ಆತ್ಮಾನಂದ ಸ್ವಾಮೀಜಿಗಳು ಗ್ರಾಮದ ಸಮಾಧಿ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ,

 ವಾಲ್ಮೀಕಿ ಕುಲ ತಿಲಕ ಕುಮಾರರಾಮ ಪರನಾರಿ ಸಹೋದರತ್ವ ಭಾವನೆಯ ಆದರ್ಶಗಳನ್ನು ಸಂಸ್ಕೃತಿ, ಆಚಾರ ವಿಚಾರಗಳನ್ನು ಇಂದಿನ ಯುವ ಜನಾಂಗ ರೂಢಿಸಿಕೊಳ್ಳಬೇಕು. ಆತನ ಪರಾಕ್ರಮ, ಜನಪರ ಆಡಳಿತ ವೈಖರಿ, ಯುದ್ಧ ನೀತಿ, ಮಾನವೀಯ ಮೌಲ್ಯಗಳನ್ನು ಹೊಂದಿದ್ದನು. ಇಂತಹ ಮಹಾನ್ ವೀರನ ದೇಶ ಭಕ್ತಿ ನಾಡಿನ ರಕ್ಷಣೆಗಾಗಿ ಪ್ರಾಣ ಬಲಿದಾನ ಮಾಡಿದ್ದಾರೆ. ವಾಲ್ಮೀಕಿ ಸಮಾಜದ ಅದೆಷ್ಟೋ ರಾಜರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ತ್ಯಾಗ ಮಾಡಿದ ಸಮಾಜಕ್ಕೆ ಇಂದಿನ ಸರ್ಕಾರ ಸಮಾಜದ ಎಲ್ಲ ರೀತಿಯ ಸಹಕಾರ ಪಡೆದು ಮೀಸಲಾತಿಯಲ್ಲಿ ಮೀನಮೇಷ ಮಾಡುತ್ತಿರುವದು ವಿಷಾದನೀಯ ಸಂಗತಿಯಾಗಿದೆ. ಇನ್ನಾದರೂ ಈ ಸರ್ಕಾರ ಧೋರಣೆಯಿಂದ ಮುಕ್ತವಾಗುತ್ತಾ ಅಥವಾ ಮುಂದುವರಿಯುತ್ತಾ ಕಾದು ನೋಡಬೇಕಾಗಿದೆ ಎಂದು ಹೇಳಿದರು.

ನಂತರದಲ್ಲಿ ವಾಲ್ಮೀಕಿ ಸಮಾನ ಮನಸ್ಕರ ಸಂಘಟನೆ ಮುಖಂಡರಾದ ಅಶೋಕ ದಿದ್ದಿಗಿ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಬೊಲ್ಲ ಕುದುರೆ ಸವಾರಿ ಕುಮಾರರಾಮ ಜೀವನವ ಹಿನ್ನೆಲೆ, ರಾಜನೀತಿ ಬಗ್ಗೆ ಮಾತನಾಡಿದರು.

ಈ ಸಂದರ್ಭ ಶೇಖರಗೌಡ ಕಾಟಗಲ್ಲ, ಬಸವರಾಜ ತುಕ್ಕಲದಿನ್ನಿ, ಸೇತುರಾಮ ನಾಯಕ ಗೌಡೂರು,  ಕನಕಪ್ಪ ತಲೆಖಾನ, ರಮೇಶ ತಲೆಖಾನ,ಸೋಮಣ್ಣ ಲಿಂಗಸುಗೂರು, ಸೋಮಶೇಖರ ಸಿಂಧನೂರು, ಗ್ವಾಲಪ್ಪ ಉಸ್ಕಿಹಾಳ, ವೆಂಕಟೇಶ, ಅಮರೇಶ,ಜಕ್ಕಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು